ಬೆಳಗಾವಿ: “ಮನೆಯಲ್ಲಿ ಫ್ರಿಡ್ಜ್, ಬೈಕ್, ಟಿವಿ ಇದ್ದಲ್ಲಿ ಬಿಪಿಎಲ್ ಪಡಿತರ ಚೀಟಿ ರದ್ದು ಮಾಡಲಾಗುವುದು” ಎಂದು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಐದು ಎಕ್ರೆಗಿಂತ ಅಧಿಕ ಜಮೀನು ಸೇರಿದಂತೆ ಮನೆಯಲ್ಲಿ ಟಿವಿ, ಫ್ರಿಡ್ಜ್ ಹಾಗೂ ಬೈಕ್ ಇದ್ದವರ ಪಡಿತರ ಚೀಟಿಯನ್ನು ರದ್ದು ಮಾಡಲಾಗುತ್ತದೆ. ಇವುಗಳ ಪೈಕಿ ಯಾವುದಾದರು ಒಂದು ಇದ್ದಲ್ಲಿ ಬಿಪಿಎಲ್ ಕಾರ್ಡ್ ಅನ್ನು ರದ್ದು ಮಾಡಲಾಗುತ್ತದೆ. ಇಂಥವರಿಗೆ ತಮ್ಮ ಬಿಪಿಎಲ್ ಕಾರ್ಡ್ ಅನ್ನು ಹಿಂದಿರುಗಿಸಲು ಮಾರ್ಚ್ ಅಂತ್ಯದವರೆಗೆ ಸಮಯಾವಕಾಶ ನೀಡಲಾಗುತ್ತದೆ” ಎಂದಿದ್ದಾರೆ.
“ಸರ್ಕಾರ ಎಪ್ರಿಲ್ ತಿಂಗಳ ನಂತರ ಕಾರ್ಡ್ ಹೊಂದಿರುವವರ ಪರಿಶೀಲನೆ ನಡೆಸಲಿದೆ. ಈ ಸಂದರ್ಭ ಎಲ್ಲಾ ಸೌಲಭ್ಯವಿದ್ದು, ಬಿಪಿಎಲ್ ಕಾರ್ಡ್ ಹೊಂದಿದ್ದಲ್ಲಿ, ಅವರಿಗೆ ದಂಡದೊಂದಿಗೆ ಶಿಕ್ಷೆಯೂ ನೀಡಲಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.
“ಅರೆ ಸರ್ಕಾರರಿ ಅಧಿಕಾರಿಗಳು ಸೇರಿದಂತೆ ಸರ್ಕಾರಿ ಅಧಿಕಾರಿಗಳು 1.20 ಲಕ್ಷ ಆದಾಯ ಇರುವವರು ಬಿಪಿಎಲ್ ಕಾರ್ಡ್ ಹೊಂದಿರಲು ಸಾಧ್ಯವೇ ಇಲ್ಲ. ಆದರೂ ಕೂಡಾ ಕೆಲವು ಅಧಿಕಾರಿಗಳು ಕಾರ್ಡ್ ಹೊಂದಿರುವ ಬಗ್ಗೆ ದೂರುಗಳು ಬಂದಿವೆ. ಈ ನಿಟ್ಟಿನಲ್ಲಿ ಈಗಿರುವ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡಲಾಗುತ್ತದೆ” ಎಂದಿದ್ದಾರೆ
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…