ಬಳ್ಳಾರಿ: ನಟ ದರ್ಶನ್ ನೋಡ್ಬೇಕು, ಮಾತಾಡ್ಬೇಕು ಎಂದು ಬಳ್ಳಾರಿ ಜೈಲಿನ ಬಳಿ ಬೆಂಗಳೂರಿನ ಕೆಂಗೇರಿ ಬಳಿಯ ಅವರ ಅಭಿಮಾನಿ ಮಹಿಳೆ ತಿಂಡಿ ತಿನಿಸುಗಳನ್ನು ತೆಗೆದುಕೊಂಡು ಬಂದು ಹೈಡ್ರಾಮಾ ಮಾಡಿರುವ ಘಟನೆ ನಡೆದಿದೆ. ದರ್ಶನ್ ನೋಡಲು ಜೈಲೊಳಗೆ ಬಿಡಿ, ಅವರ ಕುಟುಂಬ ಸದಸ್ಯರನ್ನು ಮಾತ್ರ ಬಿಡ್ತೀವಿ ಅಂತ ನೀವು ಹೇಳೊದಾದ್ರೆ ಅವರನ್ನು ಮದುವೆಯಾಗಲೂ ರೆಡಿಯಿದ್ದೇನೆ ಬೇಕಿದ್ರೆ ಎಂದು ಮಹಿಳೆ ಹೇಳಿದಾಗ ಪೊಲೀಸರು ತಬ್ಬಿಬ್ಬಾಗಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ರನ್ನ ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಿದಾಗ ದರ್ಶನ್ ನೋಡಲು ಬಂದಿದ್ದ ಮಹಿಳಾ ಅಭಿಮಾನಿ ಲಕ್ಷ್ಮಿಗೆ ದರ್ಶನ್ ನೋಡಲು ಪೊಲೀಸರು ಅವಕಾಶ ಕೊಟ್ಟಿರಲಿಲ್ಲ. ಇದೀಗ ಬೆಂಗಳೂರಿನಿಂದ ಬಳ್ಳಾರಿ ಜೈಲಿಗೆ ಬಂದಿರುವ ಅಭಿಮಾನಿ ಲಕ್ಷ್ಮೀ, ನಾನು ದರ್ಶನ್ ರನ್ನ ನೋಡಬೇಕು ಎಂದು ಜೈಲು ಸಿಬ್ಬಂದಿ ಜೊತೆ ವರಾತ ತೆಗೆದಿದ್ದಾಳೆ.
ಮನೆಯವರಿಗೆ ಮಾತ್ರ ಬಿಡೋದಾದರೆ ನಾನು ದರ್ಶನ್ನರನ್ನ ಮದುವೆಯಾಗುತ್ತೇನೆ ಎಂದ ಮಹಿಳೆ. ನನಗೆ ದರ್ಶನ್ ಇಷ್ಟ, ವಿಜಯಲಕ್ಷ್ಮೀ ರೀತಿಯಲ್ಲಿ ನಾನು ಮದುವೆಯಾಗುತ್ತೇನೆ. ಒಳಗೆ ಬಿಡಿ ನಾನು ದರ್ಶನ್ ನೋಡಲೇಬೇಕು. ಬೆಂಗಳೂರು ಜೈಲಿಗೆ ಹೋದ್ರೆ ಅಲ್ಲೂ ಬಿಡ್ಲಿಲ್ಲ. ಬಳ್ಳಾರಿಗೆ ಬಂದ್ರೆ ಇಲ್ಲೂ ಬಿಡಲ್ಲ ಅಂದ್ರೆ ಹೇಗೆ? ಎಂದು ಜೈಲು ಸಿಬ್ಬಂದಿಯನ್ನು ಪ್ರಶ್ನಿಸಿದ್ದಾಳೆ.
ನಾನಿವತ್ತು ದರ್ಶನ್ರನ್ನ ನೋಡಲೇಬೇಕು. ಹಣ್ಣು, ತಿಂಡಿ ಕೊಟ್ಟು ಮಾತಾಡಿಸಿಕೊಂಡು ಹೋಗುತ್ತೇನೆ ನನ್ನನ್ನು ಜೈಲೊಳಗೆ ಬಿಡಿ ಎಂದು ಜೈಲು ಮುಂಭಾಗ ಪಟ್ಟು ಹಿಡಿದು ಕುಳಿತಿದ್ದಾಳೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…