ಬಳ್ಳಾರಿ: ನಟ ದರ್ಶನ್ ನೋಡ್ಬೇಕು, ಮಾತಾಡ್ಬೇಕು ಎಂದು ಬಳ್ಳಾರಿ ಜೈಲಿನ ಬಳಿ ಬೆಂಗಳೂರಿನ ಕೆಂಗೇರಿ ಬಳಿಯ ಅವರ ಅಭಿಮಾನಿ ಮಹಿಳೆ ತಿಂಡಿ ತಿನಿಸುಗಳನ್ನು ತೆಗೆದುಕೊಂಡು ಬಂದು ಹೈಡ್ರಾಮಾ ಮಾಡಿರುವ ಘಟನೆ ನಡೆದಿದೆ. ದರ್ಶನ್ ನೋಡಲು ಜೈಲೊಳಗೆ ಬಿಡಿ, ಅವರ ಕುಟುಂಬ ಸದಸ್ಯರನ್ನು ಮಾತ್ರ ಬಿಡ್ತೀವಿ ಅಂತ ನೀವು ಹೇಳೊದಾದ್ರೆ ಅವರನ್ನು ಮದುವೆಯಾಗಲೂ ರೆಡಿಯಿದ್ದೇನೆ ಬೇಕಿದ್ರೆ ಎಂದು ಮಹಿಳೆ ಹೇಳಿದಾಗ ಪೊಲೀಸರು ತಬ್ಬಿಬ್ಬಾಗಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ರನ್ನ ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಿದಾಗ ದರ್ಶನ್ ನೋಡಲು ಬಂದಿದ್ದ ಮಹಿಳಾ ಅಭಿಮಾನಿ ಲಕ್ಷ್ಮಿಗೆ ದರ್ಶನ್ ನೋಡಲು ಪೊಲೀಸರು ಅವಕಾಶ ಕೊಟ್ಟಿರಲಿಲ್ಲ. ಇದೀಗ ಬೆಂಗಳೂರಿನಿಂದ ಬಳ್ಳಾರಿ ಜೈಲಿಗೆ ಬಂದಿರುವ ಅಭಿಮಾನಿ ಲಕ್ಷ್ಮೀ, ನಾನು ದರ್ಶನ್ ರನ್ನ ನೋಡಬೇಕು ಎಂದು ಜೈಲು ಸಿಬ್ಬಂದಿ ಜೊತೆ ವರಾತ ತೆಗೆದಿದ್ದಾಳೆ.
ಮನೆಯವರಿಗೆ ಮಾತ್ರ ಬಿಡೋದಾದರೆ ನಾನು ದರ್ಶನ್ನರನ್ನ ಮದುವೆಯಾಗುತ್ತೇನೆ ಎಂದ ಮಹಿಳೆ. ನನಗೆ ದರ್ಶನ್ ಇಷ್ಟ, ವಿಜಯಲಕ್ಷ್ಮೀ ರೀತಿಯಲ್ಲಿ ನಾನು ಮದುವೆಯಾಗುತ್ತೇನೆ. ಒಳಗೆ ಬಿಡಿ ನಾನು ದರ್ಶನ್ ನೋಡಲೇಬೇಕು. ಬೆಂಗಳೂರು ಜೈಲಿಗೆ ಹೋದ್ರೆ ಅಲ್ಲೂ ಬಿಡ್ಲಿಲ್ಲ. ಬಳ್ಳಾರಿಗೆ ಬಂದ್ರೆ ಇಲ್ಲೂ ಬಿಡಲ್ಲ ಅಂದ್ರೆ ಹೇಗೆ? ಎಂದು ಜೈಲು ಸಿಬ್ಬಂದಿಯನ್ನು ಪ್ರಶ್ನಿಸಿದ್ದಾಳೆ.
ನಾನಿವತ್ತು ದರ್ಶನ್ರನ್ನ ನೋಡಲೇಬೇಕು. ಹಣ್ಣು, ತಿಂಡಿ ಕೊಟ್ಟು ಮಾತಾಡಿಸಿಕೊಂಡು ಹೋಗುತ್ತೇನೆ ನನ್ನನ್ನು ಜೈಲೊಳಗೆ ಬಿಡಿ ಎಂದು ಜೈಲು ಮುಂಭಾಗ ಪಟ್ಟು ಹಿಡಿದು ಕುಳಿತಿದ್ದಾಳೆ.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…