Featured

ಮನೆ ಕಟ್ಟುವವರಿಗೆ ಸಿಹಿಸುದ್ದಿ : ಇನ್ಮುಂದೆ ಕಟ್ಟಲಿರುವ ಮನೆಯ ನಕ್ಷೆ ಮಂಜೂರಾತಿ ಬೇಕಿಲ್ಲ -Vishwanews24

ಬೆಂಗಳೂರು: ಮನೆ ಕಟ್ಟುವವರಿಗೆಗೊಂದು ಸಿಹಿಸುದ್ದಿ, ಇನ್ಮುಂದೆ ಕಟ್ಟಲಿರುವ ಮನೆಯ ನಕ್ಷೆ ಮಂಜೂರಾತಿ ಪಡೆಯಲು ಬಿಬಿಎಂಪಿ ಕಚೇರಿಗೆ ಅಲೆದಾಡುವ ಅಗತ್ಯವಿಲ್ಲ. ಬೈಲಾ ಪ್ರಕಾರ ನಕ್ಷೆ ಸಿದ್ಧಪಡಿಸಿ ಬಿಬಿಎಂಪಿಗೆ ಕಚೇರಿಗೆ ಸಲ್ಲಿಸಿದರೆ ಸಾಕು.

ಈ ಹೊಸ ವ್ಯವಸ್ಥೆ ಆಗಸ್ಟ್ 15 ರಿಂದ ಜಾರಿಗೆ ಬರಲಿದೆ. 2400 ಚ.ಅಡಿಗಿಂತ ಕಡಿಮೆ ವಿಸ್ತೀರ್ಣದ ನಿವೇಶನದಲ್ಲಿ ಕಟ್ಟಡ ನಿರ್ಮಿಸುವವರು ನೋಂದಾಯಿತ ವಾಸ್ತುಶಿಲ್ಪಿಯಿಂದ ನಕ್ಷೆಯನ್ನು ಸಿದ್ಧಪಡಿಸಿ, ಮಾಹಿತಿಗಾಗಿ ಪಾಲಿಕೆಗೆ ಸಲ್ಲಿಸಿದರೆ ಸಾಕು. ಕಟ್ಟಡ ನಕ್ಷೆ ಮಂಜೂರಾತಿ ಪಡೆಯುವ ಅಗತ್ಯವಿಲ್ಲ. ನಕ್ಷೆಯಂತೆ ಕಟ್ಟಡ ನಿರ್ಮಿಸಿದ್ದಾರೆಯೇ ಇಲ್ಲವೇ ಎಂಬುದನ್ನು ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದಾರೆ.

ಆನ್ ಲೈನ್ ಮೂಲಕವೇ ಕಟ್ಟಡ ನಕ್ಷೆಗೆ ಮಂಜೂರಾತಿ ನೀಡಲು ಕ್ರಮವಹಿಸಲಾಗಿದೆ.

ಕಟ್ಟಡ ಬೈಲಾ ಪ್ರಕಾರ ನಕ್ಷೆಯನ್ನು ಸಿದ್ಧಪಡಿಸಿ, ವೆಬ್ ಸೈಟ್ ನಲ್ಲಿ ಅಪ್ ಲೋಡ್ ಮಾಡಬೇಕು. ನೋಂದಾಯಿತ ಎಂಜಿನಿಯರ್ ಗಳು ಮತ್ತು ವಾಸ್ತುಶಿಲ್ಪಿಗಳಿಂದ ಸಿದ್ಧಪಡಿಸಿದ ನಕ್ಷೆ, ಖಾತೆ, ತೆರಿಗೆ ಪಾವತಿ ರಶೀದಿ ಸೇರಿದಂತೆ ಇನ್ನಿತರ ದಾಖಲೆಗಳನ್ನು ಪರಿಶೀಲಿಸಿ ಕಟ್ಟಡ ನಕ್ಷೆ ಮಂಜೂರಾತಿ ನೀಡಲಿದೆ. ನಂತರ ಆನ್ ಲೈನ್ ನಲ್ಲಿ ಕಟ್ಟಡ ನಕ್ಷೆ ಮಂಜೂರಾತಿ ಪ್ರಮಾಣಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು ಎಂದು ಆಯುಕ್ತ ಎಸ್. ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago