Featured

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್

ಬೆಂಗಳೂರು: ಕೆಲಸಗಾರರಿಗೆ ಸಂಬಳ ನೀಡಲು ಮನೆಯಲ್ಲಿ ಇಟ್ಟಿದ್ದ 25 ಲಕ್ಷ ರೂಪಾಯಿ ನಗದು ಕಳ್ಳತನ ಮಾಡಿ ನೇಪಾಳಕ್ಕೆ ಎಸ್ಕೇಪ್ ಆಗಲು ಯತ್ನಿಸಿದ್ದ ನೇಪಾಳಿ ಮೂಲದ ದಂಪತಿಯನ್ನು ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 25 ಲಕ್ಷ ರೂಪಾಯಿ ನಗದನ್ನು ವಶಕ್ಕೆ ಪಡೆಯಲಾಗಿದೆ.

ನೇಪಾಳ ಮೂಲದ ಪವನ್ ಬಿಸ್ತಾ ಹಾಗೂ ಸೀತಾ ಬಿಸ್ತಾ ಬಂಧಿತ ಆರೋಪಿಗಳು. ಅಮೃತಹಳ್ಳಿಯ ಕಂಟ್ರಾಕ್ಟರ್ ಒಬ್ಬರ ಮನೆಯಲ್ಲಿ ಮನೆ ಕೆಲಸಕ್ಕೆ ಸೇರಿದ್ದ ದಂಪತಿ, ಕೇವಲ ಒಂದು ತಿಂಗಳಲ್ಲೇ ಮನೆಯ ಮಾಲೀಕರು ಹಣ ಎಲ್ಲಿ ಇಡುತ್ತಾರೆ ಎಂಬ ಮಾಹಿತಿ ಕಲೆ ಹಾಕಿದ್ದರು. ಕಳ್ಳತನ ಮಾಡುವ ಉದ್ದೇಶದಿಂದಲೇ ಕಡಿಮೆ ಸಂಬಳಕ್ಕೆ ಕೆಲಸಕ್ಕೆ ಸೇರಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಇದನ್ನೂ ಓದಿ: 

ಉದ್ಯಮಿ ತಮ್ಮ ಕೆಲಸಗಾರರಿಗೆ ಸಂಬಳ ನೀಡಲು ಬ್ಯಾಂಕ್‌ನಿಂದ 25 ಲಕ್ಷ ರೂಪಾಯಿ ಡ್ರಾ ಮಾಡಿ ಮನೆಯ ಕಬೋರ್ಡ್‌ನಲ್ಲಿ ಇಟ್ಟಿದ್ದರು. ಕಬೋರ್ಡ್‌ನ ಕೀಲಿಯನ್ನು ಮತ್ತೊಂದು ಕಬೋರ್ಡ್‌ನಲ್ಲಿ ಇಟ್ಟಿರುವ ವಿಚಾರವೂ ಆರೋಪಿಗಳಿಗೆ ಗೊತ್ತಾಗಿತ್ತು. ಮನೆಯ ಮಾಲೀಕರು ಇಲ್ಲದ ಸಮಯದಲ್ಲಿ ಕಬೋರ್ಡ್ ತೆರೆದು 25 ಲಕ್ಷ ರೂಪಾಯಿ ನಗದು ಇದ್ದ ಬ್ಯಾಗ್ ಸಮೇತ ದಂಪತಿ ಪರಾರಿಯಾಗಿದ್ದರು.

ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಅಮೃತಹಳ್ಳಿ ಪೊಲೀಸರು ತನಿಖೆ ಆರಂಭಿಸಿದ್ದರು. ಆರೋಪಿಗಳು ಬೆಂಗಳೂರು ತೊರೆಯುವ ಮುನ್ನವೇ ಕಾರ್ಯಾಚರಣೆ ನಡೆಸಿದ ಪೊಲೀಸರು, ದಂಪತಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಕಳ್ಳತನ ಮಾಡಿದ್ದ 25 ಲಕ್ಷ ರೂಪಾಯಿ ನಗದನ್ನು ವಶಪಡಿಸಿಕೊಳ್ಳಲಾಗಿದೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

18 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

18 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

19 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

19 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

21 hours ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

21 hours ago