Featured

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್

ಬೆಂಗಳೂರು: ಕೆಲಸಗಾರರಿಗೆ ಸಂಬಳ ನೀಡಲು ಮನೆಯಲ್ಲಿ ಇಟ್ಟಿದ್ದ 25 ಲಕ್ಷ ರೂಪಾಯಿ ನಗದು ಕಳ್ಳತನ ಮಾಡಿ ನೇಪಾಳಕ್ಕೆ ಎಸ್ಕೇಪ್ ಆಗಲು ಯತ್ನಿಸಿದ್ದ ನೇಪಾಳಿ ಮೂಲದ ದಂಪತಿಯನ್ನು ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 25 ಲಕ್ಷ ರೂಪಾಯಿ ನಗದನ್ನು ವಶಕ್ಕೆ ಪಡೆಯಲಾಗಿದೆ.

ನೇಪಾಳ ಮೂಲದ ಪವನ್ ಬಿಸ್ತಾ ಹಾಗೂ ಸೀತಾ ಬಿಸ್ತಾ ಬಂಧಿತ ಆರೋಪಿಗಳು. ಅಮೃತಹಳ್ಳಿಯ ಕಂಟ್ರಾಕ್ಟರ್ ಒಬ್ಬರ ಮನೆಯಲ್ಲಿ ಮನೆ ಕೆಲಸಕ್ಕೆ ಸೇರಿದ್ದ ದಂಪತಿ, ಕೇವಲ ಒಂದು ತಿಂಗಳಲ್ಲೇ ಮನೆಯ ಮಾಲೀಕರು ಹಣ ಎಲ್ಲಿ ಇಡುತ್ತಾರೆ ಎಂಬ ಮಾಹಿತಿ ಕಲೆ ಹಾಕಿದ್ದರು. ಕಳ್ಳತನ ಮಾಡುವ ಉದ್ದೇಶದಿಂದಲೇ ಕಡಿಮೆ ಸಂಬಳಕ್ಕೆ ಕೆಲಸಕ್ಕೆ ಸೇರಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಇದನ್ನೂ ಓದಿ: 

ಉದ್ಯಮಿ ತಮ್ಮ ಕೆಲಸಗಾರರಿಗೆ ಸಂಬಳ ನೀಡಲು ಬ್ಯಾಂಕ್‌ನಿಂದ 25 ಲಕ್ಷ ರೂಪಾಯಿ ಡ್ರಾ ಮಾಡಿ ಮನೆಯ ಕಬೋರ್ಡ್‌ನಲ್ಲಿ ಇಟ್ಟಿದ್ದರು. ಕಬೋರ್ಡ್‌ನ ಕೀಲಿಯನ್ನು ಮತ್ತೊಂದು ಕಬೋರ್ಡ್‌ನಲ್ಲಿ ಇಟ್ಟಿರುವ ವಿಚಾರವೂ ಆರೋಪಿಗಳಿಗೆ ಗೊತ್ತಾಗಿತ್ತು. ಮನೆಯ ಮಾಲೀಕರು ಇಲ್ಲದ ಸಮಯದಲ್ಲಿ ಕಬೋರ್ಡ್ ತೆರೆದು 25 ಲಕ್ಷ ರೂಪಾಯಿ ನಗದು ಇದ್ದ ಬ್ಯಾಗ್ ಸಮೇತ ದಂಪತಿ ಪರಾರಿಯಾಗಿದ್ದರು.

ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಅಮೃತಹಳ್ಳಿ ಪೊಲೀಸರು ತನಿಖೆ ಆರಂಭಿಸಿದ್ದರು. ಆರೋಪಿಗಳು ಬೆಂಗಳೂರು ತೊರೆಯುವ ಮುನ್ನವೇ ಕಾರ್ಯಾಚರಣೆ ನಡೆಸಿದ ಪೊಲೀಸರು, ದಂಪತಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಕಳ್ಳತನ ಮಾಡಿದ್ದ 25 ಲಕ್ಷ ರೂಪಾಯಿ ನಗದನ್ನು ವಶಪಡಿಸಿಕೊಳ್ಳಲಾಗಿದೆ.

Vishwa News 24

Recent Posts

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

2 hours ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

3 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

3 hours ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

4 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

4 hours ago

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ – vishwanews24

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…

5 hours ago