Featured

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾ.ಪಂ ಸಿಬ್ಬಂದಿ ವಜಾ – vishwanews24

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ

ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ ಮನೆ ತೆರಿಗೆ ವಸೂಲಾದ ಹಣವನ್ನು ಪಂಚಾಯಿತಿ ಖಾತೆಗೆ ಜಮಾ ಮಾಡದೆ ಸ್ವಂತಕ್ಕೆ ಬಳಸಿಕೊಂಡ ಆರೋಪದ ಮೇರೆಗೆ ಪಂಚಾಯಿತಿ ಬಿಲ್ಲು ವಸೂಲಿಗ ಸಿಬ್ಬಂದಿ ಮಂಜುನಾಥ್ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.

ಉಡುಪಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಅವರು ಬುಧವಾರ ವಜಾ ಆದೇಶ ಹೊರಡಿಸಿದ್ದಾರೆ.

ಮಂಜುನಾಥ್ ಅವರು 2023–24ನೇ ಸಾಲಿನಲ್ಲಿ ₹1,18,367 ಹಾಗೂ 2024–25ನೇ ಸಾಲಿನಲ್ಲಿ ₹3,36,021 ಸೇರಿದಂತೆ ಒಟ್ಟು ₹4,54,388 ಮನೆ ತೆರಿಗೆ ಹಣವನ್ನು ಪಂಚಾಯಿತಿ ಬ್ಯಾಂಕ್ ಖಾತೆಗೆ ಜಮಾ ಮಾಡದೆ ಸ್ವಂತಕ್ಕೆ ಬಳಸಿಕೊಂಡು ದುರುಪಯೋಗಪಡಿಸಿಕೊಂಡಿರುವುದು ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.

ಈ ಕುರಿತು ಶಿವಪುರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಶೋಕ್ ಅವರು ಹೆಬ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಹಣದ ದುರುಪಯೋಗದ ವಿಚಾರ ಬೆಳಕಿಗೆ ಬಂದ ಬಳಿಕ ಪಂಚಾಯಿತಿ ವತಿಯಿಂದ ಮಂಜುನಾಥ್ ಅವರಿಗೆ ನೋಟಿಸ್ ನೀಡಲಾಗಿತ್ತು. ಈ ವೇಳೆ ಅವರು ಸುಮಾರು ₹3 ಲಕ್ಷವನ್ನು ಪಂಚಾಯಿತಿಗೆ ಮರುಪಾವತಿಸಿದ್ದು, ಉಳಿದ ಹಣವನ್ನು ಪಾವತಿಸದೆ ವಂಚಿಸಿರುವುದಾಗಿ ಪಿಡಿಒ ದೂರಿನಲ್ಲಿ ತಿಳಿಸಿದ್ದಾರೆ.

ಪಂಚಾಯಿತಿ ಹಣವನ್ನು ದುರುಪಯೋಗಪಡಿಸಿಕೊಂಡು ನಂಬಿಕೆ ದ್ರೋಹ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಮಂಜುನಾಥ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು : 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ – vishwanews24

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…

2 minutes ago

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  – vishwanews24

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  ಚುನಾವಣೆ, ಪಕ್ಷ ಸಂಘಟನೆ ಕಾರಣ…

13 minutes ago

ಏರ್ ಇಂಡಿಯಾ ವಿಮಾನದ ಎಲ್ಲಾ ಪೈಲಟ್‌ಗಳಿಗೆ ಮಾದಕ ದ್ರವ್ಯ ಪರೀಕ್ಷೆ ಕಡ್ಡಾಯ – vishwanews24

ಏರ್ ಇಂಡಿಯಾ ವಿಮಾನದ ಎಲ್ಲಾ ಪೈಲಟ್‌ಗಳಿಗೆ ಮಾದಕ ದ್ರವ್ಯ ಪರೀಕ್ಷೆ ಕಡ್ಡಾಯ ನವದೆಹಲಿ: ಆಕಾಶದಲ್ಲಿ ಹಾರಾಡುವಾಗಲೇ ತೀವ್ರ ಗಾಳಿಯ ಅಡಚಣೆಗೆ…

33 minutes ago

ರಾಷ್ಟ್ರೀಯ ಹೆದ್ದಾರಿಯಲ್ಲಿ 10 ನಿಮಿಷಗಳಲ್ಲಿ ಆಂಬ್ಯುಲೆನ್ಸ್ ಲಭ್ಯತೆ ಕಡ್ಡಾಯ: ವಿಳಂಬವಾದರೆ ₹10,000 ದಂಡ ..! vishwanews24

ರಾಷ್ಟ್ರೀಯ ಹೆದ್ದಾರಿಯಲ್ಲಿ 10 ನಿಮಿಷಗಳಲ್ಲಿ ಆಂಬ್ಯುಲೆನ್ಸ್ ಲಭ್ಯತೆ ಕಡ್ಡಾಯ: ವಿಳಂಬವಾದರೆ ₹10,000 ದಂಡ ..! ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ…

37 minutes ago

ಮೈಸೂರು: ಮದುವೆ ನಿಶ್ಚಯವಾಗಿದ್ದ SBI ಉದ್ಯೋಗಿಗಳಿಬ್ಬರು ಆತ್ಮಹತ್ಯೆಗೆ ಶರಣು – vishwanews24

ಮೈಸೂರು: ಮದುವೆ ನಿಶ್ಚಯವಾಗಿದ್ದ SBI ಉದ್ಯೋಗಿಗಳಿಬ್ಬರು ಆತ್ಮಹತ್ಯೆಗೆ ಶರಣು ಮೈಸೂರು: ಡಿಸೆಂಬರ್‌ನಲ್ಲಿ ಹಸೆಮಣೆ ಏರಬೇಕಿದ್ದ SBI ಉದ್ಯೋಗಿಗಳಿಬ್ಬರು ಪ್ರತ್ಯೇಕವಾಗಿ ಆತ್ಮಹತ್ಯೆಗೆ…

48 minutes ago

ಬಂಟ್ವಾಳ : ಅಡುಗೆ ಸಿಬ್ಬಂದಿಯನ್ನು ಪ್ರಾಣಾಪಾಯದಿಂದ ಕಾಪಾಡಿದ ವಿದ್ಯಾರ್ಥಿಗೆ ಸಿಎಂ ಮೆಚ್ಚುಗೆ – vishwanews24

ಬಂಟ್ವಾಳ : ಅಡುಗೆ ಸಿಬ್ಬಂದಿಯನ್ನು ಪ್ರಾಣಾಪಾಯದಿಂದ ಕಾಪಾಡಿದ ವಿದ್ಯಾರ್ಥಿಗೆ ಸಿಎಂ ಮೆಚ್ಚುಗೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನರಿಕೊಂಬು…

58 minutes ago