ಬೆಂಗಳೂರು: ಯಾವುದೇ ಕಾರಣಕ್ಕೆ ಮನೆ ಬದಲಿಸುವವರಿಗೆ ಗೃಹಜ್ಯೋತಿ ಅವಕಾಶವನ್ನ ಇಂಧನ ಇಲಾಖೆ ಕಲ್ಪಿಸಿದೆ. ಬಾಡಿಗೆಗೆ ಇದ್ದ ಹಳೆ ಮನೆಯ ಆರ್ಆರ್ ಸಂಖ್ಯೆ ಡಿ-ಲಿಂಕ್ ಮಾಡಿ ಹೊಸ ಮನೆಗೆ ಬಾಡಿಗೆಗೆ ಹೋಗುವ ಮನೆಯ ಸಂಖ್ಯೆಯೊಂದಿಗೆ ನೋಂದಣಿಗೆ ಅವಕಾಶ ನೀಡಲಾಗಿದೆ. ಗೃಹಜ್ಯೋತಿ ಯೋಜನೆಗೆ ಒಂದು ವರ್ಷದ ಹಿನ್ನೆಲೆ ಇಂಧನ ಇಲಾಖೆಯಿಂದ ಪ್ರಕಟಣೆ ಹೊರಡಿಸಿದೆ.
ಮನೆ ಬದಲಾಯಿಸಿದ ನಂತರ ಗೃಹಜ್ಯೋತಿ ಯೋಜನೆಯ ಲಾಭ ಪಡೆಯಲು ಹಳೆ ಮನೆಯ ಆರ್.ಆರ್. ಸಂಖ್ಯೆಯನ್ನು ಡಿ-ಲಿಂಕ್ ಮಾಡುವ ಸೌಲಭ್ಯ ಈಗ ರಾಜ್ಯದ ಜನರಿಗೆ ಲಭ್ಯವಾಗಲಿದೆ. ಗೃಹಜ್ಯೋತಿಗೆ ಒಂದು ವರ್ಷ ಸಂದ ಸಂದರ್ಭದಲ್ಲಿ ಇಂಧನ ಇಲಾಖೆ ಈ ಪ್ರಕಟಣೆ ಹೊರಡಿಸಿದೆ. ಬಾಡಿಗೆ ಮನೆ ಅಥವಾ ಯಾವುದೇ ಕಾರಣಕ್ಕೆ ಮನೆ ಬದಲಿಸುವ ಸಂದರ್ಭದಲ್ಲಿ ಹಳೆಯ ಖಾತೆ ಸಂಖ್ಯೆಯನ್ನು ಡಿ-ಲಿಂಕ್ ಮಾಡಿ, ಮತ್ತೊಂದು ಮನೆಯ ಆರ್.ಆರ್. ಸಂಖ್ಯೆಯೊಂದಿಗೆ ನೋಂದಣಿಯಾಗಿ, ಗೃಹಜ್ಯೋತಿಯ ಲಾಭ ಪಡೆಯಬಹುದಾಗಿದೆ.
ಡಿ-ಲಿಂಕ್ ಮಾಡುವುದು ಹೇಗೆ?
ಗ್ರಾಹಕರ https://sevasindhu.karnataka.gov.in/GruhaJyothi_Delink/GetAadhaarData.aspx ಲಿಂಕ್ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ. ಗೃಹಜ್ಯೋತಿ ಪೋರ್ಟಲ್ ಓಪನ್ ಆಗದೇ ಇದ್ದಲ್ಲಿ, Cache Memory Clear ಮಾಡಿ ನಂತರ ಪೋರ್ಟಲ್ ಲಿಂಕ್ ಕ್ಲಿಕ್ ಮಾಡಿ ಸೇವೆಯನ್ನು ಪಡೆಯಬಹುದಾಗಿದೆ.
ಮನೆ ಬದಲಿಸುವ ಸಂದರ್ಭದಲ್ಲಿ ಆಧಾರ್ ನಂಬರ್ ಜೊತೆ ಲಿಂಕ್ ಆಗಿರುವ ಆರ್.ಆರ್. ನಂಬರ್ ವಿವರ ಪರಿಶೀಲಿಸಿ ಡಿ-ಲಿಂಕ್ ಮಾಡಬಹುದು. ಹೊಸ ಮನೆಗೆ ಗೃಹಜ್ಯೋತಿ ಲಾಭ ಪಡೆಯಲು ಸದ್ಯ ಯಾವುದೇ ಆಧಾರ್ ಜತೆ ಲಿಂಕ್ ಆಗಿರದ ಆರ್.ಆರ್. ನಂಬರ್ಗೆ ಲಿಂಕ್ ಮಾಡಬಹುದು. ಅಂದರೆ ಈ ಹಿಂದೆ ಮನೆಯಲ್ಲಿ ವಾಸವಿದ್ದರೂ ಡಿ-ಲಿಂಕ್ ಮಾಡಿರುವುದನ್ನು ಖಾತ್ರಿಪಡಿಸಿಕೊಳ್ಳಬಹುದು.
ಗೃಹಜ್ಯೋತಿ ಯೋಜನೆಯ ವೆಬ್ಸೈಟ್ ಸಾಫ್ಟ್ವೇರ್ ಅಪ್ಡೇಟ್ ಮಾಡುವ ಡಿ-ಲಿಂಕ್ಗೆ ಇದ್ದ ತಾಂತ್ರಿಕ ತೊಂದರೆಯನ್ನು ನಿವಾರಿಸಲಾಗಿದೆ. ಡಿ-ಲಿಂಕ್ಗೆ ಅವಕಾಶ ಕಲ್ಪಿಸಿಕೊಡವಂತೆ ಗ್ರಾಹಕರು ಕೋರಿದ್ದರು. ಅದಕ್ಕೆ ಸ್ಪಂದಿಸಿ ಈ ಡಿ-ಲಿಂಕ್ಗೆ ಅವಕಾಶ ಮಾಡಿಕೊಡಲಿದೆ. ಗ್ರಾಹಕರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಇಂಧನ ಇಲಾಖೆ ತಿಳಿಸಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…