Featured

ಮನೆ ಬದಲಿಸುವವರಿಗೆ ಗೃಹಜ್ಯೋತಿ ಅವಕಾಶ ; ಡಿ-ಲಿಂಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ..vishwanews24

ಮನೆ, ಬಾಡಿಗೆ ಮನೆ ಬದಲಿಸುವವರಿಗೆ ಗೃಹಜ್ಯೋತಿ; ಡಿ-ಲಿಂಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

ಬೆಂಗಳೂರು: ಯಾವುದೇ ಕಾರಣಕ್ಕೆ ಮನೆ ಬದಲಿಸುವವರಿಗೆ ಗೃಹಜ್ಯೋತಿ ಅವಕಾಶವನ್ನ ಇಂಧನ ಇಲಾಖೆ ಕಲ್ಪಿಸಿದೆ. ಬಾಡಿಗೆಗೆ ಇದ್ದ ಹಳೆ ಮನೆಯ ಆರ್‌ಆರ್ ಸಂಖ್ಯೆ ಡಿ-ಲಿಂಕ್ ಮಾಡಿ ಹೊಸ ಮನೆಗೆ ಬಾಡಿಗೆಗೆ ಹೋಗುವ ಮನೆಯ ಸಂಖ್ಯೆಯೊಂದಿಗೆ ನೋಂದಣಿಗೆ ಅವಕಾಶ ನೀಡಲಾಗಿದೆ. ಗೃಹಜ್ಯೋತಿ ಯೋಜನೆಗೆ ಒಂದು ವರ್ಷದ ಹಿನ್ನೆಲೆ ಇಂಧನ ಇಲಾಖೆಯಿಂದ ಪ್ರಕಟಣೆ ಹೊರಡಿಸಿದೆ.

ಮನೆ ಬದಲಾಯಿಸಿದ ನಂತರ ಗೃಹಜ್ಯೋತಿ ಯೋಜನೆಯ ಲಾಭ ಪಡೆಯಲು ಹಳೆ ಮನೆಯ ಆರ್.ಆರ್. ಸಂಖ್ಯೆಯನ್ನು ಡಿ-ಲಿಂಕ್ ಮಾಡುವ ಸೌಲಭ್ಯ ಈಗ ರಾಜ್ಯದ ಜನರಿಗೆ ಲಭ್ಯವಾಗಲಿದೆ. ಗೃಹಜ್ಯೋತಿಗೆ ಒಂದು ವರ್ಷ ಸಂದ ಸಂದರ್ಭದಲ್ಲಿ ಇಂಧನ ಇಲಾಖೆ ಈ ಪ್ರಕಟಣೆ ಹೊರಡಿಸಿದೆ. ಬಾಡಿಗೆ ಮನೆ ಅಥವಾ ಯಾವುದೇ ಕಾರಣಕ್ಕೆ ಮನೆ ಬದಲಿಸುವ ಸಂದರ್ಭದಲ್ಲಿ ಹಳೆಯ ಖಾತೆ ಸಂಖ್ಯೆಯನ್ನು ಡಿ-ಲಿಂಕ್ ಮಾಡಿ, ಮತ್ತೊಂದು ಮನೆಯ ಆರ್.ಆರ್. ಸಂಖ್ಯೆಯೊಂದಿಗೆ ನೋಂದಣಿಯಾಗಿ, ಗೃಹಜ್ಯೋತಿಯ ಲಾಭ ಪಡೆಯಬಹುದಾಗಿದೆ.

ಡಿ-ಲಿಂಕ್‌ ಮಾಡುವುದು ಹೇಗೆ?
ಗ್ರಾಹಕರ https://sevasindhu.karnataka.gov.in/GruhaJyothi_Delink/GetAadhaarData.aspx ಲಿಂಕ್ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ. ಗೃಹಜ್ಯೋತಿ ಪೋರ್ಟಲ್ ಓಪನ್ ಆಗದೇ ಇದ್ದಲ್ಲಿ, Cache Memory Clear ಮಾಡಿ ನಂತರ ಪೋರ್ಟಲ್ ಲಿಂಕ್ ಕ್ಲಿಕ್ ಮಾಡಿ ಸೇವೆಯನ್ನು ಪಡೆಯಬಹುದಾಗಿದೆ.

ಮನೆ ಬದಲಿಸುವ ಸಂದರ್ಭದಲ್ಲಿ ಆಧಾರ್‌ ನಂಬರ್‌ ಜೊತೆ ಲಿಂಕ್‌ ಆಗಿರುವ ಆರ್‌.ಆರ್‌. ನಂಬರ್‌ ವಿವರ ಪರಿಶೀಲಿಸಿ ಡಿ-ಲಿಂಕ್‌ ಮಾಡಬಹುದು. ಹೊಸ ಮನೆಗೆ ಗೃಹಜ್ಯೋತಿ ಲಾಭ ಪಡೆಯಲು ಸದ್ಯ ಯಾವುದೇ ಆಧಾರ್‌ ಜತೆ ಲಿಂಕ್‌ ಆಗಿರದ ಆರ್‌.ಆರ್‌. ನಂಬರ್‌ಗೆ ಲಿಂಕ್‌ ಮಾಡಬಹುದು. ಅಂದರೆ ಈ ಹಿಂದೆ ಮನೆಯಲ್ಲಿ ವಾಸವಿದ್ದರೂ ಡಿ-ಲಿಂಕ್‌ ಮಾಡಿರುವುದನ್ನು ಖಾತ್ರಿಪಡಿಸಿಕೊಳ್ಳಬಹುದು.

ಗೃಹಜ್ಯೋತಿ ಯೋಜನೆಯ ವೆಬ್‌ಸೈಟ್‌ ಸಾಫ್ಟ್‌ವೇರ್‌ ಅಪ್‌ಡೇಟ್‌ ಮಾಡುವ ಡಿ-ಲಿಂಕ್‌ಗೆ ಇದ್ದ ತಾಂತ್ರಿಕ ತೊಂದರೆಯನ್ನು ನಿವಾರಿಸಲಾಗಿದೆ. ಡಿ-ಲಿಂಕ್‌ಗೆ ಅವಕಾಶ ಕಲ್ಪಿಸಿಕೊಡವಂತೆ ಗ್ರಾಹಕರು ಕೋರಿದ್ದರು. ಅದಕ್ಕೆ ಸ್ಪಂದಿಸಿ ಈ ಡಿ-ಲಿಂಕ್‌ಗೆ ಅವಕಾಶ ಮಾಡಿಕೊಡಲಿದೆ. ಗ್ರಾಹಕರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಇಂಧನ ಇಲಾಖೆ ತಿಳಿಸಿದೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

5 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

5 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

6 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

6 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

6 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

6 hours ago