ಮೈಸೂರು : ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಬೆನ್ನಲ್ಲೇ ಪೊಲೀಸ್ ಇಲಾಖೆ ಹೈ ಅಲರ್ಟ್ ಆಗಿದ್ದು, ಮೈಸೂರಿನಲ್ಲಿ ನೂತನ ನಿಯಮ ಜಾರಿಗೆ ತಂದಿದೆ.
ಮೈಸೂರು ನಗರ ಪೊಲೀಸರು ಈ ನೂತನ ನಿಯಮ ಜಾರಿಗೆ ತಂದಿದ್ದಾರೆ.
ಬಾಡಿಗೆ ಮನೆ ನೀಡಬೇಕು ಎಂದಾದರೆ ಮೊದಲು ಹತ್ತಿರದ ಪೊಲೀಸ್ ಠಾಣೆಯಲ್ಲಿ 100 ರೂ ಪಾವತಿ ಮಾಡಿ ಅರ್ಜಿ ಪಡೆದು ಕ್ಲಿಯರೆನ್ಸ್ ಸರ್ಟಿಫಿಕೇಟ್ ಪಡೆಯಬೇಕು ಎಂದು ಸೂಚನೆ ನೀಡಲಾಗಿದೆ. ಅದೇ ರೀತಿ ಬ್ಯಾಚುಲರ್ ಹಾಗೂ ಕುಟುಂಬವರಿಗೆ ಪಿಜಿ ಕೊಡುವವರಿಗೆ ಕೂಡ ಪ್ರತ್ಯೇಕ ಅರ್ಜಿ ಮೀಸಲು ಇರಿಸಲಾಗಿದೆ.
ಬಾಡಿಗೆ ಕೊಡುವ ಮುನ್ನ ಸಮೀಪದ ಪೊಲೀಸ್ ಠಾಣೆಗೆ ವಿಷಯ ತಿಳಿಸಿ ಬಾಡಿಗೆ ಇರುವವರ ಮಾಹಿತಿಯನ್ನು ಠಾಣೆಗೆ ನೀಡುವಂತೆ ಪೊಲೀಸರು ಸೂಚನೆ ನೀಡಿದ್ದಾರೆ. ಎಲ್ಲಾ ಠಾಣೆಗಳಲ್ಲಿ ಕಟ್ಟು ನಿಟ್ಟಾಗಿ ಈ ನಿಯಮ ಪಾಲಿಸುವಂತೆ ನಗರ ಪೊಲೀಸ್ ಆಯುಕ್ತ ರಮೇಶ್ ಖಡಕ್ ಆದೇಶ ಹೊರಡಿಸಿದ್ದಾರೆ.
ಇನ್ನೂ, ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣವನ್ನು ಇಂದು ರಾಷ್ಟ್ರೀಯ ತನಿಖಾ ದಳ (NIA) ತನಿಖೆ ಆರಂಭಿಸಲಿದ್ದು, ಈಗಾಗಲೇ ಎಫ್ ಐಆರ್ ದಾಖಲಿಸಿದೆ.
ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದಲ್ಲಿ ಭಯೋತ್ಪಾದನೆ ಸಂಘಟನೆ ಪಾತ್ರ ಕಂಡು ಬಂದಿರುವ ಹಿನ್ನೆಲೆಯಲ್ಲಿ ಕಾನೂನು ಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲಿಸಿಕೊಂಡಿದೆ. ಪ್ರಕರಣದಲ್ಲಿ ಮಹಮದ್ ಶಾರೀಕ್ ನನ್ನು ಮೊದಲ ಆರೋಪಿಯನ್ನಾಗಿ ಹೆಸರಿಸಲಾಗಿದೆ.
ಐಸಿಸ್ ಪ್ರೇರಿತ ಅಲ್ ಹಿಂದ ಸಂಘಟನೆಯ ಮೊಹಮ್ಮದ್ ಮತೀನ್ ತಾಹಾನ ಸೂಚನೆ ಮತ್ತು ಸಂಪರ್ಕದ ಮೇರೆಗೆ ಶಾರೀಕ್ ಉಗ್ರ ಕೃತ್ಯದಲ್ಲಿ ತೊಡಗಿದ್ದಾನೆ ಎಂದು ಎಫ್ ಐಆರ್ ನಲ್ಲಿ ಉಲ್ಲೇಖಿಸಲಾಗಿದೆ. ಇಂದಿನಿಂದ ಮಂಗಳೂರಿನಲ್ಲಿ ಎನ್ ಐಎ ತನಿಖೆ ಆರಂಭವಾಗಲಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…