ಮೈಸೂರು : ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಬೆನ್ನಲ್ಲೇ ಪೊಲೀಸ್ ಇಲಾಖೆ ಹೈ ಅಲರ್ಟ್ ಆಗಿದ್ದು, ಮೈಸೂರಿನಲ್ಲಿ ನೂತನ ನಿಯಮ ಜಾರಿಗೆ ತಂದಿದೆ.
ಮೈಸೂರು ನಗರ ಪೊಲೀಸರು ಈ ನೂತನ ನಿಯಮ ಜಾರಿಗೆ ತಂದಿದ್ದಾರೆ.
ಬಾಡಿಗೆ ಮನೆ ನೀಡಬೇಕು ಎಂದಾದರೆ ಮೊದಲು ಹತ್ತಿರದ ಪೊಲೀಸ್ ಠಾಣೆಯಲ್ಲಿ 100 ರೂ ಪಾವತಿ ಮಾಡಿ ಅರ್ಜಿ ಪಡೆದು ಕ್ಲಿಯರೆನ್ಸ್ ಸರ್ಟಿಫಿಕೇಟ್ ಪಡೆಯಬೇಕು ಎಂದು ಸೂಚನೆ ನೀಡಲಾಗಿದೆ. ಅದೇ ರೀತಿ ಬ್ಯಾಚುಲರ್ ಹಾಗೂ ಕುಟುಂಬವರಿಗೆ ಪಿಜಿ ಕೊಡುವವರಿಗೆ ಕೂಡ ಪ್ರತ್ಯೇಕ ಅರ್ಜಿ ಮೀಸಲು ಇರಿಸಲಾಗಿದೆ.
ಬಾಡಿಗೆ ಕೊಡುವ ಮುನ್ನ ಸಮೀಪದ ಪೊಲೀಸ್ ಠಾಣೆಗೆ ವಿಷಯ ತಿಳಿಸಿ ಬಾಡಿಗೆ ಇರುವವರ ಮಾಹಿತಿಯನ್ನು ಠಾಣೆಗೆ ನೀಡುವಂತೆ ಪೊಲೀಸರು ಸೂಚನೆ ನೀಡಿದ್ದಾರೆ. ಎಲ್ಲಾ ಠಾಣೆಗಳಲ್ಲಿ ಕಟ್ಟು ನಿಟ್ಟಾಗಿ ಈ ನಿಯಮ ಪಾಲಿಸುವಂತೆ ನಗರ ಪೊಲೀಸ್ ಆಯುಕ್ತ ರಮೇಶ್ ಖಡಕ್ ಆದೇಶ ಹೊರಡಿಸಿದ್ದಾರೆ.
ಇನ್ನೂ, ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣವನ್ನು ಇಂದು ರಾಷ್ಟ್ರೀಯ ತನಿಖಾ ದಳ (NIA) ತನಿಖೆ ಆರಂಭಿಸಲಿದ್ದು, ಈಗಾಗಲೇ ಎಫ್ ಐಆರ್ ದಾಖಲಿಸಿದೆ.
ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದಲ್ಲಿ ಭಯೋತ್ಪಾದನೆ ಸಂಘಟನೆ ಪಾತ್ರ ಕಂಡು ಬಂದಿರುವ ಹಿನ್ನೆಲೆಯಲ್ಲಿ ಕಾನೂನು ಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲಿಸಿಕೊಂಡಿದೆ. ಪ್ರಕರಣದಲ್ಲಿ ಮಹಮದ್ ಶಾರೀಕ್ ನನ್ನು ಮೊದಲ ಆರೋಪಿಯನ್ನಾಗಿ ಹೆಸರಿಸಲಾಗಿದೆ.
ಐಸಿಸ್ ಪ್ರೇರಿತ ಅಲ್ ಹಿಂದ ಸಂಘಟನೆಯ ಮೊಹಮ್ಮದ್ ಮತೀನ್ ತಾಹಾನ ಸೂಚನೆ ಮತ್ತು ಸಂಪರ್ಕದ ಮೇರೆಗೆ ಶಾರೀಕ್ ಉಗ್ರ ಕೃತ್ಯದಲ್ಲಿ ತೊಡಗಿದ್ದಾನೆ ಎಂದು ಎಫ್ ಐಆರ್ ನಲ್ಲಿ ಉಲ್ಲೇಖಿಸಲಾಗಿದೆ. ಇಂದಿನಿಂದ ಮಂಗಳೂರಿನಲ್ಲಿ ಎನ್ ಐಎ ತನಿಖೆ ಆರಂಭವಾಗಲಿದೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…