ಮೈಸೂರು : ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಬೆನ್ನಲ್ಲೇ ಪೊಲೀಸ್ ಇಲಾಖೆ ಹೈ ಅಲರ್ಟ್ ಆಗಿದ್ದು, ಮೈಸೂರಿನಲ್ಲಿ ನೂತನ ನಿಯಮ ಜಾರಿಗೆ ತಂದಿದೆ.
ಮೈಸೂರು ನಗರ ಪೊಲೀಸರು ಈ ನೂತನ ನಿಯಮ ಜಾರಿಗೆ ತಂದಿದ್ದಾರೆ.
ಬಾಡಿಗೆ ಮನೆ ನೀಡಬೇಕು ಎಂದಾದರೆ ಮೊದಲು ಹತ್ತಿರದ ಪೊಲೀಸ್ ಠಾಣೆಯಲ್ಲಿ 100 ರೂ ಪಾವತಿ ಮಾಡಿ ಅರ್ಜಿ ಪಡೆದು ಕ್ಲಿಯರೆನ್ಸ್ ಸರ್ಟಿಫಿಕೇಟ್ ಪಡೆಯಬೇಕು ಎಂದು ಸೂಚನೆ ನೀಡಲಾಗಿದೆ. ಅದೇ ರೀತಿ ಬ್ಯಾಚುಲರ್ ಹಾಗೂ ಕುಟುಂಬವರಿಗೆ ಪಿಜಿ ಕೊಡುವವರಿಗೆ ಕೂಡ ಪ್ರತ್ಯೇಕ ಅರ್ಜಿ ಮೀಸಲು ಇರಿಸಲಾಗಿದೆ.
ಬಾಡಿಗೆ ಕೊಡುವ ಮುನ್ನ ಸಮೀಪದ ಪೊಲೀಸ್ ಠಾಣೆಗೆ ವಿಷಯ ತಿಳಿಸಿ ಬಾಡಿಗೆ ಇರುವವರ ಮಾಹಿತಿಯನ್ನು ಠಾಣೆಗೆ ನೀಡುವಂತೆ ಪೊಲೀಸರು ಸೂಚನೆ ನೀಡಿದ್ದಾರೆ. ಎಲ್ಲಾ ಠಾಣೆಗಳಲ್ಲಿ ಕಟ್ಟು ನಿಟ್ಟಾಗಿ ಈ ನಿಯಮ ಪಾಲಿಸುವಂತೆ ನಗರ ಪೊಲೀಸ್ ಆಯುಕ್ತ ರಮೇಶ್ ಖಡಕ್ ಆದೇಶ ಹೊರಡಿಸಿದ್ದಾರೆ.
ಇನ್ನೂ, ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣವನ್ನು ಇಂದು ರಾಷ್ಟ್ರೀಯ ತನಿಖಾ ದಳ (NIA) ತನಿಖೆ ಆರಂಭಿಸಲಿದ್ದು, ಈಗಾಗಲೇ ಎಫ್ ಐಆರ್ ದಾಖಲಿಸಿದೆ.
ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದಲ್ಲಿ ಭಯೋತ್ಪಾದನೆ ಸಂಘಟನೆ ಪಾತ್ರ ಕಂಡು ಬಂದಿರುವ ಹಿನ್ನೆಲೆಯಲ್ಲಿ ಕಾನೂನು ಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲಿಸಿಕೊಂಡಿದೆ. ಪ್ರಕರಣದಲ್ಲಿ ಮಹಮದ್ ಶಾರೀಕ್ ನನ್ನು ಮೊದಲ ಆರೋಪಿಯನ್ನಾಗಿ ಹೆಸರಿಸಲಾಗಿದೆ.
ಐಸಿಸ್ ಪ್ರೇರಿತ ಅಲ್ ಹಿಂದ ಸಂಘಟನೆಯ ಮೊಹಮ್ಮದ್ ಮತೀನ್ ತಾಹಾನ ಸೂಚನೆ ಮತ್ತು ಸಂಪರ್ಕದ ಮೇರೆಗೆ ಶಾರೀಕ್ ಉಗ್ರ ಕೃತ್ಯದಲ್ಲಿ ತೊಡಗಿದ್ದಾನೆ ಎಂದು ಎಫ್ ಐಆರ್ ನಲ್ಲಿ ಉಲ್ಲೇಖಿಸಲಾಗಿದೆ. ಇಂದಿನಿಂದ ಮಂಗಳೂರಿನಲ್ಲಿ ಎನ್ ಐಎ ತನಿಖೆ ಆರಂಭವಾಗಲಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…