ಬೆಂಗಳೂರು: ಸರ್ಕಾರದಿಂದ ಯಾರಿಗೆ ಒಂದು ರೂಪಾಯಿ ಹಣ ಕೊಟ್ಟರೂ ಅದಕ್ಕೆ ಲೆಕ್ಕ, ಹೊಣೆಗಾರಿಕೆ ಇರಬೇಕು. ಫಲಾನುಭವಿ ಆಗುವವರು ಮತದಾರರ ಗುರುತಿನ ಚೀಟಿ, ಬ್ಯಾಂಕ್ ಖಾತೆ, ಆಧಾರ್ ಕಾರ್ಡ್ ಹೊಂದಿರಬೇಕು. ಬೇರೆಯವರ ಬ್ಯಾಂಕ್ ಖಾತೆಗೆ ಹಣ ನೀಡಲಾಗುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮನೆ ಯಜಮಾನಿ ಯಾರು ಎಂದು ಮನೆಯವರೇ ತೀರ್ಮಾನ ಮಾಡಬೇಕು. ಅವರ ಮನೆ ವಿಚಾರದಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ. ಮತದಾರರ ಗುರುತಿನಿ ಚೀಟಿ, ಎಪಿಎಲ್, ಬಿಪಿಎಲ್ ಕಾರ್ಡ್ ಗಳಲ್ಲಿ ಯಾವ ಮನೆಯಲ್ಲಿ ಯಾರೆಲ್ಲಾ ಇದ್ದಾರೆ ಎಂದು ಮಾಹಿತಿ ಇದೆ ಎಂದರು.
ಬಿಜೆಪಿ, ಜನತಾ ದಳದವರಿಗೆ ಈ ಯೋಜನೆ ಜಾರಿಯನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ಅವರ ಅಸೂಯೆಗೆ ಮದ್ದಿಲ್ಲ. ನಮ್ಮ ಯೋಜನೆ ಬಗ್ಗೆ ಮಾತನಾಡುವವರು ಮೊದಲು ಬಿಜೆಪಿಯವರ ಉದ್ಯೋಗ ಭರವಸೆ ಬಗ್ಗೆ ಮಾತಾಡಲಿ. ಎಲ್ಲರ ಖಾತೆಗೆ 15 ಲಕ್ಷ ಹಾಕಿಸಲಿ. ಆ ಬಗ್ಗೆ ಯಾಕೆ ಯಾರೂ ಕೇಳುತ್ತಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವವರನ್ನು ಬೇಡ ಎನ್ನಲು ಸಾಧ್ಯವೇ? ಎಂದು ಹೇಳಿದರು.
ತೆರಿಗೆ ಪಾವತಿದಾರರು ನಿಮಗೆ ಮತ ಹಾಕಿಲ್ಲವೇ ಎಂದು ಕೇಳಿದಾಗ, ‘ನಾವು ಬಡವರಿಗೆ ನೆರವು ನೀಡಲು ನಿರ್ಧರಿಸಿದ್ದೇವೆ. ತೆರಿಗೆ, ಜಿಎಸ್ಟಿ ಪಾವತಿದಾರರು ಈ ಯೋಜನೆ ಬೇಕು ಎಂದು ಕೇಳುತ್ತಿಲ್ಲ. ಅನೇಕರು ಈ ಯೋಜನೆ ಬೇಡ ಎಂದು ನಮಗೆ ಪತ್ರ ಬರೆದಿದ್ದಾರೆ. ವಿದ್ಯುತ್ ಗ್ಯಾರಂಟಿ ವಿಚಾರದಲ್ಲಿ ಬಾಡಿಗೆ ಮನೆಯವರ ಬಗ್ಗೆ ಅಧಿಕಾರಿಗಳು ಒಂದು ಆಯಾಮ ನೀಡಿದ್ದರು. ಆದರೆ ನಾವು ಆ ಬಗ್ಗೆ ಸ್ಪಷ್ಟನೆ ನೀಡಿದ್ದೇವೆ’ ಎಂದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…