ಬೆಂಗಳೂರು: ಸರ್ಕಾರದಿಂದ ಯಾರಿಗೆ ಒಂದು ರೂಪಾಯಿ ಹಣ ಕೊಟ್ಟರೂ ಅದಕ್ಕೆ ಲೆಕ್ಕ, ಹೊಣೆಗಾರಿಕೆ ಇರಬೇಕು. ಫಲಾನುಭವಿ ಆಗುವವರು ಮತದಾರರ ಗುರುತಿನ ಚೀಟಿ, ಬ್ಯಾಂಕ್ ಖಾತೆ, ಆಧಾರ್ ಕಾರ್ಡ್ ಹೊಂದಿರಬೇಕು. ಬೇರೆಯವರ ಬ್ಯಾಂಕ್ ಖಾತೆಗೆ ಹಣ ನೀಡಲಾಗುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮನೆ ಯಜಮಾನಿ ಯಾರು ಎಂದು ಮನೆಯವರೇ ತೀರ್ಮಾನ ಮಾಡಬೇಕು. ಅವರ ಮನೆ ವಿಚಾರದಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ. ಮತದಾರರ ಗುರುತಿನಿ ಚೀಟಿ, ಎಪಿಎಲ್, ಬಿಪಿಎಲ್ ಕಾರ್ಡ್ ಗಳಲ್ಲಿ ಯಾವ ಮನೆಯಲ್ಲಿ ಯಾರೆಲ್ಲಾ ಇದ್ದಾರೆ ಎಂದು ಮಾಹಿತಿ ಇದೆ ಎಂದರು.
ಬಿಜೆಪಿ, ಜನತಾ ದಳದವರಿಗೆ ಈ ಯೋಜನೆ ಜಾರಿಯನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ಅವರ ಅಸೂಯೆಗೆ ಮದ್ದಿಲ್ಲ. ನಮ್ಮ ಯೋಜನೆ ಬಗ್ಗೆ ಮಾತನಾಡುವವರು ಮೊದಲು ಬಿಜೆಪಿಯವರ ಉದ್ಯೋಗ ಭರವಸೆ ಬಗ್ಗೆ ಮಾತಾಡಲಿ. ಎಲ್ಲರ ಖಾತೆಗೆ 15 ಲಕ್ಷ ಹಾಕಿಸಲಿ. ಆ ಬಗ್ಗೆ ಯಾಕೆ ಯಾರೂ ಕೇಳುತ್ತಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವವರನ್ನು ಬೇಡ ಎನ್ನಲು ಸಾಧ್ಯವೇ? ಎಂದು ಹೇಳಿದರು.
ತೆರಿಗೆ ಪಾವತಿದಾರರು ನಿಮಗೆ ಮತ ಹಾಕಿಲ್ಲವೇ ಎಂದು ಕೇಳಿದಾಗ, ‘ನಾವು ಬಡವರಿಗೆ ನೆರವು ನೀಡಲು ನಿರ್ಧರಿಸಿದ್ದೇವೆ. ತೆರಿಗೆ, ಜಿಎಸ್ಟಿ ಪಾವತಿದಾರರು ಈ ಯೋಜನೆ ಬೇಕು ಎಂದು ಕೇಳುತ್ತಿಲ್ಲ. ಅನೇಕರು ಈ ಯೋಜನೆ ಬೇಡ ಎಂದು ನಮಗೆ ಪತ್ರ ಬರೆದಿದ್ದಾರೆ. ವಿದ್ಯುತ್ ಗ್ಯಾರಂಟಿ ವಿಚಾರದಲ್ಲಿ ಬಾಡಿಗೆ ಮನೆಯವರ ಬಗ್ಗೆ ಅಧಿಕಾರಿಗಳು ಒಂದು ಆಯಾಮ ನೀಡಿದ್ದರು. ಆದರೆ ನಾವು ಆ ಬಗ್ಗೆ ಸ್ಪಷ್ಟನೆ ನೀಡಿದ್ದೇವೆ’ ಎಂದರು.
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …