Featured

‘ಮನ್ನಾ ಮಾಡದಿದ್ದರೆ ಯಾರೂ ಸಾಲ ಕಟ್ಟಬೇಡಿ’ : ರೈತ ಸಂಘ

ರೈತರ ಸಾಲ ಮನ್ನಾದಿಂದ ರಾಜ್ಯದಲ್ಲಿ ಸಂಕಷ್ಟಎದುರಾಗಲಿದೆ ಎಂಬ ಆರ್ಥಿಕ ತಜ್ಞರ ಅಭಿಪ್ರಾಯ ಸರಿಯಿಲ್ಲ. ಯಾವುದೇ ಕಾರಣಕ್ಕೂ ತಪ್ಪು ಲೆಕ್ಕಾಚಾರ ನೀಡುವ ಆರ್ಥಿಕ ತಜ್ಞರ ಸಲಹೆಗಳನ್ನು ಸ್ವೀಕರಿಸಬಾರದು. ಚುನಾವಣಾ ವೇಳೆ ನೀಡಿದ ಭರವಸೆಯಂತೆ ಸಾಲ ಮನ್ನಾ ಮಾಡಬೇಕು. ಬಜೆಟ್‌ನಲ್ಲಿ ರೈತರ ಸಾಲ ಮನ್ನಾ ಘೋಷಿಸದಿದ್ದರೆ ಯಾವ ರೈತರೂ ಸಾಲ ತೀರಿಸಬೇಡಿ ಎಂದು ರೈತ ಸಂಘ ಕರೆ ನೀಡಿದರು.

ಬೆಂಗಳೂರು :  ಬೆಳೆ ಸಾಲವನ್ನು ದೇಶದ ಆಹಾರ ಉತ್ಪಾದನೆಗಾಗಿ ಸರ್ಕಾರದಿಂದ ನೀಡಿರುವ ಧನ ಸಹಾಯ ಎಂದು ಪರಿಗಣಿಸಿ ಸರ್ಕಾರ ರೈತರ ಎಲ್ಲ ಸಾಲವನ್ನು ಮನ್ನಾ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಒತ್ತಾಯಿಸಿದೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌, ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಬಜೆಟ್‌ನಲ್ಲಿ ಸಾಲ ಮನ್ನಾ ಘೋಷಿಸಬೇಕು. ರೈತರ ಸಾಲ ಮನ್ನಾದಿಂದ ರಾಜ್ಯದಲ್ಲಿ ಸಂಕಷ್ಟಎದುರಾಗಲಿದೆ ಎಂಬ ಆರ್ಥಿಕ ತಜ್ಞರ ಅಭಿಪ್ರಾಯ ಸರಿಯಿಲ್ಲ. ಯಾವುದೇ ಕಾರಣಕ್ಕೂ ತಪ್ಪು ಲೆಕ್ಕಾಚಾರ ನೀಡುವ ಆರ್ಥಿಕ ತಜ್ಞರ ಸಲಹೆಗಳನ್ನು ಸ್ವೀಕರಿಸಬಾರದು. ಚುನಾವಣಾ ವೇಳೆ ನೀಡಿದ ಭರವಸೆಯಂತೆ ಸಾಲ ಮನ್ನಾ ಮಾಡಬೇಕು. ಬಜೆಟ್‌ನಲ್ಲಿ ರೈತರ ಸಾಲ ಮನ್ನಾ ಘೋಷಿಸದಿದ್ದರೆ ಯಾವ ರೈತರೂ ಸಾಲ ತೀರಿಸಬೇಡಿ. ನಮ್ಮಿಂದ ಸಾಲ ಕಟ್ಟಲು ಸಾಧ್ಯವಿಲ್ಲವೆಂದು ಬ್ಯಾಂಕ್‌ಗಳಿಗೆ ತಿಳಿಸಿ ಎಂದು ರೈತರಿಗೆ ಕರೆ ನೀಡಿದರು.

ಸಾಲ ಮನ್ನಾ ವಿಚಾರದಲ್ಲಿ ರಾಜ್ಯದ ಸಮ್ಮಿಶ್ರ ಸರ್ಕಾರದ ನಿಲುವು ದ್ವಂದ್ವಮಯವಾಗಿದೆ. ಕುಮಾರಸ್ವಾಮಿ ಅವರು ರೈತರ ಸಂಕಷ್ಟವನ್ನು ಅರ್ಥಮಾಡಿಕೊಳ್ಳಬೇಕು. ಸಾಲ ಮನ್ನಾ ವಿಚಾರಕ್ಕೆ ಸಂಬಂಧಿಸಿದಂತೆ ಕಾಲಹರಣ ಮಾಡಬಾರದು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಲ ಮನ್ನಾ ವಿಚಾರದಲ್ಲಿ ಸರ್ಕಾರಕ್ಕೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಹೇಳಿದರು.

ರೈತರ ಸಂಕಷ್ಟಗಳನ್ನು ಪರಿಹರಿಸಲು ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಹಾಗೂ ಸ್ವಾಮಿನಾಥನ್‌ ವರದಿ ಅನ್ವಯ ಕನಿಷ್ಠ ಬೆಂಬಲ ಬೆಲೆ ಘೋಷಿಸಬೇಕೆಂದು ಆಗ್ರಹಿಸಿದರು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

3 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

3 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

4 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

4 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

6 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

6 hours ago