ಮಫ್ಲರ್ನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ SSLC ವಿದ್ಯಾರ್ಥಿ- vishwanews24
ಮಫ್ಲರ್ನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಎಸ್ಎಸ್ಎಲ್ಸಿ ವಿದ್ಯಾರ್ಥಿ
ಚಿತ್ರದುರ್ಗ: ಎಸ್ಎಸ್ಎಲ್ಸಿ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ಮಫ್ಲರ್ನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗದ ಹೊಳಲ್ಕೆರೆ ತಾಲೂಕಿನ ರಂಗಾಫುರ ಗ್ರಾಮದಲ್ಲಿ ನಡೆದಿದೆ. ರಂಗಾಪುರದ ಚಂದ್ರಶೇಖರ್ ಎಂಬವರ ಪುತ್ರ ಪ್ರಜ್ವಲ್(15 ವ) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಹೊಳಲ್ಕೆರೆ ವಾಗ್ದೇವಿ ಶಾಲೆ ಯಲ್ಲಿ ಹತ್ತನೇ ತರಗತಿ ವ್ಯಾಸಾಂಗ ಮಾಡುತ್ತಿದ್ದನು.
ಶಾಲೆಯಲ್ಲಿ ನಡೆಸಲಾಗಿದ್ದ ಪರೀಕ್ಷೆಗೆ ಆತ ಹಾಜರಾಗಿರಲಿಲ್ಲ. ಹೀಗಾಗಿ ಶಾಲಾ ಶಿಕ್ಷಕರು ಪೋಷಕರನ್ನು ಕರೆದುಕೊಂಡು ಬರುವಂತೆ ಬಾಲಕನಿಗೆ ಹೇಳಿದ್ದಾರೆ. ಶಾಲೆಯಿಂದ ಮರಳಿ ಮನೆಗೆ ಬಂದವನು ನಾನು ಓದಿಕೊಳ್ಳುತ್ತೇನೆ ಎಂದು ಹೇಳಿ ಮನೆಯ ಕೋಣೆಯೊಳಗೆ ಹೋಗಿದ್ದಾನೆ. ಅಲ್ಲಿ ಮಫ್ಲರ್ನಿಂದ ನೇಣು ಬಿಗಿದುಕೊಂಡಿದ್ದಾನೆ. ಪುತ್ರನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಹೊಳಲ್ಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
