ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕೆನ್ನೆಗೆ ಪ್ರಜಾಪ್ರಭುತ್ವದ ಹೊಡೆತ ನೀಡಬೇಕು ಎಂದು ಹೇಳಿಕೆ ನೀಡಿರುವ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರ ಎಲ್ಲಾ ಮಿತಿಗಳನ್ನು ಮೀರಿದ್ದಾರೆ ಎಂದು ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಅವರು ಕಿಡಿ ಕಾರಿದ್ದಾರೆ.
ಮಮತಾ ವಿರುದ್ಧ ಟ್ವೀಟ್ ಮಾಡಿರುವ ಸುಷ್ಮಾ ‘ಮಮತಾ ಜಿ ನೀವು ಇಂದು ಎಲ್ಲಾ ಮಿತಿಗಳನ್ನು ಮೀರಿದ್ದೀರಿ. ನೀವು ಒಂದು ರಾಜ್ಯದ ಮುಖ್ಯಮಂತ್ರಿ, ಮೋದಿ ಅವರು ದೇಶದ ಪ್ರಧಾನ ಮಂತ್ರಿ. ನಾಳೆ ನೀವು ಅವರೊಂದಿಗೆ ಮಾತುಕತೆ ನಡೆಸಲೇ ಬೇಕು. ಹಾಗಾಗಿ ನಾನು ನಿಮಗೆ ಬಶೀರ್ ಬದ್ರ್ ಅವರ ಶಾಯಿರಿಯನ್ನು ನೆನಪಿಸುತ್ತಿದ್ದೇನೆ. ನನ್ನ ವಿರುದ್ಧ ಎಷ್ಟು ಬೇಕಾದರೂ ಹಗೆ ಸಾಧಿಸು, ಆದರೆ ಮುಂದೊಂದು ದಿನ ನಾವು ಸ್ನೇಹಿತರಾದಾಗ ಅದರಿಂದ ನಿನಗೆ ನಾಚಿಕೆಯಾಬಾರದು’ ಎಂದು ತಿಳಿಸಿದ್ದಾರೆ.
ಚುನಾವಣಾ ಪ್ರಚಾರ ಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಕಿಡಿ ಕಾರಿದ ಮಮತಾ ಬ್ಯಾನರ್ಜಿ ‘ನನಗೆ ಹಣ ಮುಖ್ಯವಲ್ಲ. ಹಾಗಾಗಿಯೇ ಮೋದಿ ಅವರು ಬಂಗಾಳಕ್ಕೆ ಬಂದು ನಮ್ಮ ಪಕ್ಷವನ್ನು ತೊಲಾಬಾಜ್ (ಸಂಘಟಿತ ಸುಲಿಗೆ ಮಾಡುವವರು) ಎಂದು ಆರೋಪಿಸಿದ್ದಾರೆ. ಹೀಗಾಗಿ ಅವರ ಕೆನ್ನೆಗೆ ಪ್ರಜಾಪ್ರಭುತ್ವದ ಹೊಡೆತ ನೀಡಬೇಕು ಎನಿಸುತ್ತಿದೆ ಎಂದು ತಿಳಿಸಿದ್ದರು.
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…