ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕೆನ್ನೆಗೆ ಪ್ರಜಾಪ್ರಭುತ್ವದ ಹೊಡೆತ ನೀಡಬೇಕು ಎಂದು ಹೇಳಿಕೆ ನೀಡಿರುವ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರ ಎಲ್ಲಾ ಮಿತಿಗಳನ್ನು ಮೀರಿದ್ದಾರೆ ಎಂದು ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಅವರು ಕಿಡಿ ಕಾರಿದ್ದಾರೆ.
ಮಮತಾ ವಿರುದ್ಧ ಟ್ವೀಟ್ ಮಾಡಿರುವ ಸುಷ್ಮಾ ‘ಮಮತಾ ಜಿ ನೀವು ಇಂದು ಎಲ್ಲಾ ಮಿತಿಗಳನ್ನು ಮೀರಿದ್ದೀರಿ. ನೀವು ಒಂದು ರಾಜ್ಯದ ಮುಖ್ಯಮಂತ್ರಿ, ಮೋದಿ ಅವರು ದೇಶದ ಪ್ರಧಾನ ಮಂತ್ರಿ. ನಾಳೆ ನೀವು ಅವರೊಂದಿಗೆ ಮಾತುಕತೆ ನಡೆಸಲೇ ಬೇಕು. ಹಾಗಾಗಿ ನಾನು ನಿಮಗೆ ಬಶೀರ್ ಬದ್ರ್ ಅವರ ಶಾಯಿರಿಯನ್ನು ನೆನಪಿಸುತ್ತಿದ್ದೇನೆ. ನನ್ನ ವಿರುದ್ಧ ಎಷ್ಟು ಬೇಕಾದರೂ ಹಗೆ ಸಾಧಿಸು, ಆದರೆ ಮುಂದೊಂದು ದಿನ ನಾವು ಸ್ನೇಹಿತರಾದಾಗ ಅದರಿಂದ ನಿನಗೆ ನಾಚಿಕೆಯಾಬಾರದು’ ಎಂದು ತಿಳಿಸಿದ್ದಾರೆ.
ಚುನಾವಣಾ ಪ್ರಚಾರ ಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಕಿಡಿ ಕಾರಿದ ಮಮತಾ ಬ್ಯಾನರ್ಜಿ ‘ನನಗೆ ಹಣ ಮುಖ್ಯವಲ್ಲ. ಹಾಗಾಗಿಯೇ ಮೋದಿ ಅವರು ಬಂಗಾಳಕ್ಕೆ ಬಂದು ನಮ್ಮ ಪಕ್ಷವನ್ನು ತೊಲಾಬಾಜ್ (ಸಂಘಟಿತ ಸುಲಿಗೆ ಮಾಡುವವರು) ಎಂದು ಆರೋಪಿಸಿದ್ದಾರೆ. ಹೀಗಾಗಿ ಅವರ ಕೆನ್ನೆಗೆ ಪ್ರಜಾಪ್ರಭುತ್ವದ ಹೊಡೆತ ನೀಡಬೇಕು ಎನಿಸುತ್ತಿದೆ ಎಂದು ತಿಳಿಸಿದ್ದರು.
ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು…
ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…
ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…
ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…
ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಯಾವುದೇ…
ಮುಂಬೈ-ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…