ಕೊಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ದೇಶದ ಮುಂದಿನ ಪ್ರಧಾನಿ ಆಗಬೇಕೆನ್ನುವುದು ಜನತೆ ಬಯಸುತ್ತಾರೆ ಎಂದು ಸಂಸದ ಹಾಗೂ ಮಾಜಿ ಸಚಿವ ದಿನೇಶ್ ತ್ರಿವೇದಿ ಹೇಳಿದ್ದಾರೆ.
“ನೀವು ನನ್ನೊಂದಿಗೆ ಜನರನ್ನು ನೋಡಿರಬಹುದು. ನಾವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇವೆ. ಹಾಗಾಗಿ ಜನರಿಗೆ ಬಂದುಕುಗಳೊಂದಿಗೆ ಇರಬೇಕೋ ಅಥವಾ ಅಭಿವೃದ್ಧಿಯನ್ನು ಬೆಂಬಲಿಸಬೇಕೋ ಎಂಬುದು ತಿಳಿದಿದೆ. ಪ್ರಧಾನಿ ಇಲ್ಲಿಗೆ ಬಂದಷ್ಟೂ ನಮಗೆ(ಮಮತಾ ಬ್ಯಾನರ್ಜಿಗೆ) ಹೆಚ್ಚಿನ ಮತ ದೊರೆಯುತ್ತದೆ” ಎಂದು ದಿನೇಶ್ ತಿಳಿಸಿದ್ದಾರೆ.
ಮುಂದುವರೆದು ಮಾತನಾಡುತ್ತಾ, ಜನತೆಗೆ ಕೇವಲ ಭರವಸೆಗಳನ್ನು ನಿಡುವ ರಾಜಕಾರಣಿಗಳನ್ನು ನೋಡಿ ಬೇಸರವಾಗಿದೆ.ಹಾಗಾಗಿ ರಾಜ್ಯದಲ್ಲಿ ಅಭಿವೃದ್ಧಿಯನ್ನು ತಂದಿರುವ ತೃಣಮೂಲ ಕಾಂಗ್ರೆಸ್ ಪಕ್ಷವನ್ನು ಜನತೆ ಬೆಂಬಲಿಸಲಿದ್ದಾರೆ. ರಾಜ್ಯದ ಎಲ್ಲಾ 42 ಲೋಕಸಭಾ ಸ್ಥಾನಗಳಲ್ಲೂ ತೃಣಮೂಲ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದಿದ್ದಾರೆ.
“ಪಶ್ಚಿಮ ಬಂಗಾಳದ ಜನತೆ ಬದಲಾವಣೆ ಬಯಸುತ್ತಿದ್ದಾರೆ. ಆ ಬದಲಾವಣೆಯನ್ನು ದೀದಿ(ಮಮತಾ) ನೀಡಿದ್ದಾರೆ. ಈಗ ಭಾರತ ಬದಲಾವಣೆ ಬಯಸುತ್ತಿದೆ. ಅದನ್ನೂ ಸಹ ದೀದಿ(ಮಮತಾ) ತರಲಿದ್ದಾರೆ” ಎಂದು ದಿನೇಶ್ ತ್ರಿವೇದಿ ತಿಳಿಸಿದ್ದಾರೆ.
ದರ್ಶನ್ ಪುತ್ರನಿದ್ದ ಕಾರು ಅಪಘಾತ : ವಿನೀಶ್ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…
ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ ಉಡುಪಿ : ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ –…
ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…