ಅಲ್ವಾರ್ : ರಾಜಸ್ಥಾನದ ಬಿಜೆಪಿ ಸಚಿವ ಜಸ್ವಂತ್ ಸಿಂಗ್ ಯಾದವ್ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿರುದ್ಧ ಹರಿಹಾಯ್ದಿದ್ದಾರೆ.ಮಮತಾ ಬ್ಯಾನರ್ಜಿಯವರು ಮಾನಸಿಕ ಸಮತೋಲನವನ್ನು ಕಳೆದುಕೊಂಡಿದ್ದಾರೆ ಈ ಕೂಡಲೇ ಅವರು ಹಿಂದು ಧರ್ಮವನ್ನು ಬಿಟ್ಟು ತೊಲಗಬೇಕು ಎಂದು ಕಿಡಿಕಾರಿದ್ದಾರೆ.
ಇತ್ತೀಚೆಗೆ ಮಮತಾ ಬ್ಯಾನರ್ಜಿಯವರು ಬಲಪಂಥೀಯ ಸಂಘಟನೆಗಳ ಬಗ್ಗೆ ನೀಡಿದ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿರುವ ಅವರು ಒಬ್ಬ ವ್ಯಕ್ತಿಗೆ ಇರಬೇಕಾದ ಸಾಮಾನ್ಯ ಜ್ಞಾನ ,ದೇಶದ ಮೇಲಿನ ಪ್ರೀತಿ ಎಲ್ಲಾ ವಿಚಾರಗಳು ಮಮತಾ ಬ್ಯಾನರ್ಜಿಯವರಿಗೆ ಇಲ್ಲವಾಗಿದೆ. ಸುಖಾ ಸುಮ್ಮನೆ ಹಿಂದು ಸಂಘಟನೆಗಳು ತೀವ್ರವಾದಿಗಳೆಂದು ಹೇಳಿಕೆ ಮಮತಾ ಬ್ಯಾನರ್ಜಿಯವರು ನೀಡಿದ್ದಾರೆ.
ಮಮತಾ ಬ್ಯಾನರ್ಜಿ ಅವರು ಈ ಕೂಡಲೇ ಇಂದು ಧರ್ಮವನ್ನು ಬಿಟ್ಟು ಹೋಗಬೇಕು ಎಂದು ಅವರು ಹೇಳಿದ್ದಾರೆ.ಮಮತಾ ಬ್ಯಾನರ್ಜಿಯವರು ಜುಲೈ21 ರಂದು ತೃಣಮೂಲ ಕಾಂಗ್ರೆಸ್ ಸಮಾವೇಶದ ಬೃಹತ್ ರಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು ದೇಶದಲ್ಲಿ ಸಾಮೂಹಿಕ ಹಲ್ಲೆ ವಿರುದ್ಧ ಕಿಡಿಕಾರಿ ಹಿಂದೂ ಸಂಘಟನೆಗಳು ತೀವ್ರಗಾಮಿಗಳು ಎಂದು ಹೇಳಿಕೆ ನೀಡಿದ್ದಾರೆ.
ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…
ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…
ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…
ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…
ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…
ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…