ಹೌರ : ಮಮತಾ ಬ್ಯಾನರ್ಜಿ ಅವರ ಆಡಳಿತದಲ್ಲಿ ಪಶ್ಚಿಮ ಬಂಗಾಳ ಮತ್ತೊಂದು ಕಾಶ್ಮೀರವಾಗಲಿದೆ ಎಂದು ಬಾರಕ್ಪುರ್ ಕ್ಷೇತ್ರದ ಬಿಜೆಪಿ ಸಂಸದ ಅರ್ಜುನ್ ಸಿಂಗ್ ಟೀಕಿಸಿದ್ದಾರೆ.
ದೀದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಸಿಂಗ್, ಮಮತಾ ಬ್ಯಾನರ್ಜಿ ಅವರಿಗೆ ಅಧಿಕಾರದ ಆಸೆ ಹೆಚ್ಚಾಗಿದ್ದು, ಅಧಿಕಾರಕ್ಕಾಗಿ ಏನನ್ನಾದರೂ ಮಾಡಲು ಸಿದ್ಧರಿದ್ದಾರೆ. ಹೀಗಾಗಿ ಈಗ ಪಶ್ಚಿಮ ಬಂಗಾಳವನ್ನು ಕಾಶ್ಮೀರವಾಗಿ ಪರಿವರ್ತಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಮಮತಾ ಬ್ಯಾನರ್ಜಿಯ ಸಹಚರರು ಹಾಗೂ ತೃಣಮೂಲ ಕಾಂಗ್ರೆಸ್ನ ನಾಯಕರು ಹೊರಗಿನ ಗೂಂಡಾಗಳಿಗೆ ಆಶ್ರಯ ನೀಡುತ್ತಿದ್ದಾರೆ. ಇದನ್ನೆಲ್ಲ ತಿಳಿದಿದ್ದರೂ ಪೊಲೀಸರು ದೀದಿಯ ಸೇನೆಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ಅರ್ಜುನ್ ಸಿಂಗ್ ಆರೋಪಿಸಿದ್ದಾರೆ.
ತೃಣಮೂಲ ಕಾಂಗ್ರೆಸ್ನ 107 ಶಾಸಕರು ಬಿಜೆಪಿಯ ಸಂಪರ್ಕದಲ್ಲಿದ್ದಾರೆ. ಆದರೆ ಮಮತಾ ಬ್ಯಾನರ್ಜಿ ಭತ್ಪರದಲ್ಲಿ ಚುನಾವಣೆಗೆ ನಿಂತು ಗೆದ್ದು ತೋರಿಸಲಿ, ಅವರ ಬೆದರಿಕೆಗೆ ಅಲ್ಲಿನ ಜನ ಬಗ್ಗುವುದಿಲ್ಲ. ಅವರಿಗೆ ಬೇಕಿರುವುದು ಬಿಜೆಪಿ ಮತ್ತು ಅರ್ಜುನ್ ಸಿಂಗ್ ಎಂದು ಸವಾಲೆಸೆದರಲ್ಲದೆ 2021ರ ಚುನಾವಣೆಯಲ್ಲಿ ಬಿಜೆಪಿಯು ಪಶ್ಚಿಮ ಬಂಗಾಳದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…