ಹೌರ : ಮಮತಾ ಬ್ಯಾನರ್ಜಿ ಅವರ ಆಡಳಿತದಲ್ಲಿ ಪಶ್ಚಿಮ ಬಂಗಾಳ ಮತ್ತೊಂದು ಕಾಶ್ಮೀರವಾಗಲಿದೆ ಎಂದು ಬಾರಕ್ಪುರ್ ಕ್ಷೇತ್ರದ ಬಿಜೆಪಿ ಸಂಸದ ಅರ್ಜುನ್ ಸಿಂಗ್ ಟೀಕಿಸಿದ್ದಾರೆ.
ದೀದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಸಿಂಗ್, ಮಮತಾ ಬ್ಯಾನರ್ಜಿ ಅವರಿಗೆ ಅಧಿಕಾರದ ಆಸೆ ಹೆಚ್ಚಾಗಿದ್ದು, ಅಧಿಕಾರಕ್ಕಾಗಿ ಏನನ್ನಾದರೂ ಮಾಡಲು ಸಿದ್ಧರಿದ್ದಾರೆ. ಹೀಗಾಗಿ ಈಗ ಪಶ್ಚಿಮ ಬಂಗಾಳವನ್ನು ಕಾಶ್ಮೀರವಾಗಿ ಪರಿವರ್ತಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಮಮತಾ ಬ್ಯಾನರ್ಜಿಯ ಸಹಚರರು ಹಾಗೂ ತೃಣಮೂಲ ಕಾಂಗ್ರೆಸ್ನ ನಾಯಕರು ಹೊರಗಿನ ಗೂಂಡಾಗಳಿಗೆ ಆಶ್ರಯ ನೀಡುತ್ತಿದ್ದಾರೆ. ಇದನ್ನೆಲ್ಲ ತಿಳಿದಿದ್ದರೂ ಪೊಲೀಸರು ದೀದಿಯ ಸೇನೆಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ಅರ್ಜುನ್ ಸಿಂಗ್ ಆರೋಪಿಸಿದ್ದಾರೆ.
ತೃಣಮೂಲ ಕಾಂಗ್ರೆಸ್ನ 107 ಶಾಸಕರು ಬಿಜೆಪಿಯ ಸಂಪರ್ಕದಲ್ಲಿದ್ದಾರೆ. ಆದರೆ ಮಮತಾ ಬ್ಯಾನರ್ಜಿ ಭತ್ಪರದಲ್ಲಿ ಚುನಾವಣೆಗೆ ನಿಂತು ಗೆದ್ದು ತೋರಿಸಲಿ, ಅವರ ಬೆದರಿಕೆಗೆ ಅಲ್ಲಿನ ಜನ ಬಗ್ಗುವುದಿಲ್ಲ. ಅವರಿಗೆ ಬೇಕಿರುವುದು ಬಿಜೆಪಿ ಮತ್ತು ಅರ್ಜುನ್ ಸಿಂಗ್ ಎಂದು ಸವಾಲೆಸೆದರಲ್ಲದೆ 2021ರ ಚುನಾವಣೆಯಲ್ಲಿ ಬಿಜೆಪಿಯು ಪಶ್ಚಿಮ ಬಂಗಾಳದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…