Featured

ಮಮತಾ ಬ್ಯಾನರ್ಜಿ ಸರಕಾರಕ್ಕೆ ಭಾರೀ ಹೊಡೆತ ; ಟಿಎಂಸಿ ಬಿಟ್ಟು ಬಿಜೆಪಿ ಸೇರಿದ ಸಂಸದ

ನವದೆಹಲಿ:ತೃಣಮೂಲ ಕಾಂಗ್ರೆಸ್‌ ಪಕ್ಷದ (ಟಿಎಂಸಿ) ಸಂಸದ ಸೌಮಿತ್ರ ಖಾನ್‌ ಬುಧವಾರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ದೆಹಲಿಯ ಬಿಜೆಪಿ ಮುಖ್ಯ ಕಚೇರಿಯಲ್ಲಿ ಸಂಸದ ಸೌಮಿತ್ರ ಖಾನ್‌ ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್‌ ಹಾಗೂ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಅಧ್ಯಕ್ಷ ಮುಖಲ್ ರಾಯ್‌ ಉಪಸ್ಥಿತರಿದ್ದರು.

ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಸೌಮಿತ್ರ ಖಾನ್‌ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಿ ಬಂಗಾಳದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸುತ್ತೇನೆ ಎಂದರು.

ಸೌಮಿತ್ರ ಟಿಎಂಸಿಯ ಹಿರಿಯ ನಾಯಕರು ಆಗಿದ್ದಾರೆ. ಇವರ ಜೊತೆ ಟಿಎಂಸಿಯ ಐವರು ಸಂಸದರು ಸಂಪರ್ಕದಲ್ಲಿ ಇದ್ದಾರೆ ಎನ್ನಲಾಗಿದೆ. ಸೌಮಿತ್ರ ಪಕ್ಷ ತೊರೆದಿರುವುದು ಟಿಎಂಸಿಗೆ ಹಿನ್ನಡೆಯಾದಂತೆ ಎಂದೇ ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌  ಏಕಾಂಗಿಯಾಗಿ ಸ್ಪರ್ಧೆ ಮಾಡುವ ಸುಳಿವು ನೀಡಿರುವ ಹಿನ್ನೆಲೆಯಲ್ಲಿ ಟಿಎಂಸಿಯ ಅಲ್ಪಸಂಖ್ಯಾತ ಘಟಕದ ಕಾರ್ಯಕರ್ತರು ಕಾಂಗ್ರೆಸ್ ಸೇರುತ್ತಿದ್ದಾರೆ. ಕಳೆದೊಂದು ವಾರದಲ್ಲಿ 2000ಕ್ಕೂ ಹೆಚ್ಚು ಟಿಎಂಸಿ ಕಾರ್ಯಕರ್ತರು ಕಾಂಗ್ರೆಸ್ ಸೇರಿದ್ದಾರೆ ಎಂದು ಸ್ಥಳೀಯ ಸುದ್ದಿವಾಹಿಗಳು ವರದಿ ಮಾಡಿವೆ.

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

6 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

6 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

6 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

6 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

6 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

7 hours ago