ಉಡುಪಿ:ಮರಳುಗಾರಿಕೆಗೆ ಪೂರ್ಣ ಪ್ರಮಾಣದಲ್ಲಿ ಅವಕಾಶ ಕೊಡುವವರೆಗೂ ಈ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಮುಂದುವರಿಯಲಿದೆ. ಮರಳುಗಾರಿಕೆಗೆ ಪರವಾನಿಗೆ ಕೊಡುವ ವಿಚಾರದಲ್ಲಿ ನಮಗೆ ರಾಜ್ಯ ಸರ್ಕಾರ, ಜಿಲ್ಲಾಡಳಿತದಿಂದ ನ್ಯಾಯ ಸಿಕ್ಕಿಲ್ಲ ಈ ಹಿನ್ನೆಲೆಯಲ್ಲಿ ನವೆಂಬರ್ 10ರಂದು ಉಡುಪಿ ಜಿಲ್ಲೆ ಬಂದ್ ನಡೆಸಲು ಸರ್ವ ಸಂಘಟನೆ ನಿರ್ಧಾರ ತೆಗೆದುಕೊಂಡಿರುವುದಾಗಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.
ಬುಧವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಿರತ ಮರಳು ಹೋರಾಟ ಸಮಿತಿಯ ಸರ್ವ ಸಂಘಟನೆ ಜೊತೆ ಸಭೆ ನಡೆಸಿದ ನಂತರ ಸಭೆಯಲ್ಲಿ ಕೈಗೊಂಡ ನಿರ್ಧಾರವನ್ನು ಶಾಸಕ ರಘುಪತಿ ಅವರು ಸುದ್ದಿಗಾರರಿಗೆ ತಿಳಿಸಿದರು.
ರಾಜ್ಯ, ಕೇಂದ್ರ ಮತ್ತು ಜಿಲ್ಲಾಡಳಿತ ಎಚ್ಚೆತ್ತುಕೊಳ್ಳುವ ನಿಟ್ಟಿನಲ್ಲಿ ನವೆಂಬರ್ 10ರಂದು ಉಡುಪಿ ಜಿಲ್ಲಾ ಬಂದ್ ನಡೆಸಲು ಸರ್ವಾನುಮತದ ನಿರ್ಧಾರ ತೆಗೆದುಕೊಳ್ಳಲಾಗಿದೆ. ನ.10ರ ನಂತರ ಕಟ್ಟಡ ಗುತ್ತಿಗೆದಾರರು, ಇಂಜಿನಿಯರ್ ಗಳು, ಕಟ್ಟಡ ನಿರ್ಮಾಣ ಸಾಮಾಗ್ರಿ ಮಾರಾಟ ಮಾಡುವ ಅಂಗಡಿ, ಮುಂಗಟ್ಟನ್ನು ಸ್ವಯಂ ಆಗಿ ಬಂದ್ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.
ಒಂದು ವೇಳೆ ನವೆಂಬರ್ 10ರೊಳಗೆ ನಮ್ಮ ಸಮಸ್ಯೆ ಇತ್ಯರ್ಥಗೊಂಡರೆ ಧರಣಿ ಮುಂದುವರಿಸುವುದಿಲ್ಲ, ಬಂದ್ ನಡೆಸುವ ಅವಶ್ಯಕತೆಯೂ ಇಲ್ಲ ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ, ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಕಾಪು ಶಾಸಕ ಲಾಲಾಜಿ ಮೆಂಡನ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಜಾಹೀರಾತುಗಳು
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…