ಉಡುಪಿ:ಮರಳುಗಾರಿಕೆಗೆ ಪೂರ್ಣ ಪ್ರಮಾಣದಲ್ಲಿ ಅವಕಾಶ ಕೊಡುವವರೆಗೂ ಈ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಮುಂದುವರಿಯಲಿದೆ. ಮರಳುಗಾರಿಕೆಗೆ ಪರವಾನಿಗೆ ಕೊಡುವ ವಿಚಾರದಲ್ಲಿ ನಮಗೆ ರಾಜ್ಯ ಸರ್ಕಾರ, ಜಿಲ್ಲಾಡಳಿತದಿಂದ ನ್ಯಾಯ ಸಿಕ್ಕಿಲ್ಲ ಈ ಹಿನ್ನೆಲೆಯಲ್ಲಿ ನವೆಂಬರ್ 10ರಂದು ಉಡುಪಿ ಜಿಲ್ಲೆ ಬಂದ್ ನಡೆಸಲು ಸರ್ವ ಸಂಘಟನೆ ನಿರ್ಧಾರ ತೆಗೆದುಕೊಂಡಿರುವುದಾಗಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.
ಬುಧವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಿರತ ಮರಳು ಹೋರಾಟ ಸಮಿತಿಯ ಸರ್ವ ಸಂಘಟನೆ ಜೊತೆ ಸಭೆ ನಡೆಸಿದ ನಂತರ ಸಭೆಯಲ್ಲಿ ಕೈಗೊಂಡ ನಿರ್ಧಾರವನ್ನು ಶಾಸಕ ರಘುಪತಿ ಅವರು ಸುದ್ದಿಗಾರರಿಗೆ ತಿಳಿಸಿದರು.
ರಾಜ್ಯ, ಕೇಂದ್ರ ಮತ್ತು ಜಿಲ್ಲಾಡಳಿತ ಎಚ್ಚೆತ್ತುಕೊಳ್ಳುವ ನಿಟ್ಟಿನಲ್ಲಿ ನವೆಂಬರ್ 10ರಂದು ಉಡುಪಿ ಜಿಲ್ಲಾ ಬಂದ್ ನಡೆಸಲು ಸರ್ವಾನುಮತದ ನಿರ್ಧಾರ ತೆಗೆದುಕೊಳ್ಳಲಾಗಿದೆ. ನ.10ರ ನಂತರ ಕಟ್ಟಡ ಗುತ್ತಿಗೆದಾರರು, ಇಂಜಿನಿಯರ್ ಗಳು, ಕಟ್ಟಡ ನಿರ್ಮಾಣ ಸಾಮಾಗ್ರಿ ಮಾರಾಟ ಮಾಡುವ ಅಂಗಡಿ, ಮುಂಗಟ್ಟನ್ನು ಸ್ವಯಂ ಆಗಿ ಬಂದ್ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.
ಒಂದು ವೇಳೆ ನವೆಂಬರ್ 10ರೊಳಗೆ ನಮ್ಮ ಸಮಸ್ಯೆ ಇತ್ಯರ್ಥಗೊಂಡರೆ ಧರಣಿ ಮುಂದುವರಿಸುವುದಿಲ್ಲ, ಬಂದ್ ನಡೆಸುವ ಅವಶ್ಯಕತೆಯೂ ಇಲ್ಲ ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ, ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಕಾಪು ಶಾಸಕ ಲಾಲಾಜಿ ಮೆಂಡನ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಜಾಹೀರಾತುಗಳು
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…