Featured

ಮರಳು ಸಮಸ್ಯೆಗೆ ಶಾಶ್ವತ ಪರಿಹಾರಕ್ಕಾಗಿ ಶಕ್ತಿ ಮೀರಿ ಪ್ರಯತ್ನಿಸುತ್ತೇನೆ : ಪ್ರಮೋದ್‌ ಮಧ್ವರಾಜ್‌ – Vishwanews24

ಉಡುಪಿ: ಕೇಂದ್ರ ಸರಕಾರದ ತಪ್ಪು ನೀತಿಯಿಂದ ಇಂದು ಉಡುಪಿ ಜಿಲ್ಲೆಯ ಜನತೆಗೆ ಮರಳು ಲಭಿಸುತ್ತಿಲ್ಲ. ಚುನಾವಣೆಯ ನೀತಿಸಂಹಿತೆ ಜಾರಿಯಲ್ಲಿರುವುದರಿಂದ ಆ ಪ್ರಕ್ರಿಯೆ ಮುಗಿದ ತತ್‌ಕ್ಷಣ ಜಿಲ್ಲಾಧಿಕಾರಿ ನೇತೃತ್ವದ 7 ಜನ ಸದಸ್ಯರ ಸಭೆಯನ್ನು ಕರೆಸಿ ಜಿಲ್ಲೆಯಲ್ಲಿ ರಾಜ್ಯ ಸರಕಾರ ಗುರುತಿಸಿದ 7.38 ಲಕ್ಷ ಟನ್‌ ಮರಳನ್ನು ತೆರವುಗೊಳಿಸಲು ಪರವಾನಿಗೆ ದಾರರನ್ನು ನೇಮಿಸಿ ಜನರಿಗೆ ಮರಳು ಲಭ್ಯವಾಗು ವಂತೆ ಮಾಡುವಲ್ಲಿ ನಾನು ಶಕ್ತಿ ಮೀರಿ ಪ್ರಯತ್ನಿಸುತ್ತೇನೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ಹೇಳಿದರು.

ಅವರು ಕುಂದಾಪುರದಲ್ಲಿ ನಡೆದ ಚುನಾವಣ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.ಹಾರಾಡಿಯ ಕುಕ್ಕುಡೆ ಗ್ರಾಮಸ್ಥರ ಪರವಾಗಿ ಕೆಲವು ಗ್ರಾಮಸ್ಥರು ಅಕ್ರಮ ಮರಳುಗಾರಿಕೆ ವಿರುದ್ಧ ಹಸಿರು ಪೀಠ ನ್ಯಾಯಾಧಿಕರಣಕ್ಕೆ ದೂರು ಸಲ್ಲಿಸಿರುವುದರಿಂದ ಸಿಆರ್‌ಝಡ್‌ ಪ್ರದೇಶದಲ್ಲಿ ಮರಳುಗಾರಿಕೆಗೆ ಹಸಿರು ನ್ಯಾಯಪೀಠ ತಡೆಯಾಜ್ಞೆ ನೀಡಿತ್ತು. ಹಲವು ತಿಂಗಳುಗಳ ಕಾಲ ಮರಳು ಸಿಗದೆ ಕಟ್ಟಡ ಕಾರ್ಮಿಕರಿಗೆ ಮತ್ತು ಜನರಿಗೆ ತುಂಬಾ ತೊಂದರೆ ಆಗಿತ್ತು. ಅದನ್ನು ಮನಗಂಡು ತಾನು ಸಚಿವನಾಗಿದ್ದಾಗ ಆಗಿನ ರಾಜ್ಯದ ಕಾನೂನು ಮಂತ್ರಿ ಟಿ.ಬಿ. ಜಯಚಂದ್ರ ಹಾಗೂ ರಾಜ್ಯ ಸರಕಾರದ ವಕೀಲರಾದ ಅಶೋಕ್‌ ದೇವರಾಜ್‌ ಅವರಲ್ಲಿ ನಿರಂತರ ಸಂಪರ್ಕವಿರಿಸಿ ಸಿಆರ್‌ಝಡ್‌ ಪ್ರದೇಶದಲ್ಲಿ ಮರಳುಗಾರಿಕೆಗೆ ಇದ್ದ ತಡೆಯಾಜ್ಞೆಯನ್ನು ತೆರವುಗೊಳಿಸುವಲ್ಲಿ ಅವಿರತ ಶ್ರಮಪಟ್ಟಿದ್ದೇನೆ. ಅದರ ಫ‌ಲಶ್ರುತಿಯಾಗಿ 2017-18ರಲ್ಲಿ 27 ಮರಳು ದಿಬ್ಬಗಳನ್ನು ಗುರುತಿಸಿ 9 ಲಕ್ಷ ಟನ್‌ ಮರಳು ತೆರವುಗೊಳಿಸುವ ಕಾರ್ಯ ಪ್ರಾರಂಭಗೊಂಡು 165 ಪರವಾನಿಗೆದಾರರನ್ನು ನೋಂದಾಯಿಸಿ ಸುಮಾರು 6 ಲಕ್ಷ ಟನ್‌ ಮರಳು ತೆರವುಗೊಳಿಸಲಾಗಿದೆ ಎಂದು ಪ್ರಮೋದ್‌ ತಿಳಿಸಿದರು.

ಉಡುಪಿ ಜಿಲ್ಲೆಯ ಜನತೆಗೆ ಸಕಾಲದಲ್ಲಿ ಮರಳು ಸಿಗಬೇಕೆಂಬ ನನ್ನ ನಿರ್ಧಾರ ಅಚಲವಾಗಿದೆ. ಕಳೆದ ವಿಧಾನಸಭಾ ಚುನಾವಣೆ ಸಂದರ್ಭ ರಘುಪತಿ ಭಟ್ಟರು ತಾನು ಶಾಸಕನಾದರೆ ಒಂದು ತಿಂಗಳ ಒಳಗೆ ಮನೆ ಬಾಗಿಲಿಗೆ ತಂದು ಮರಳು ಕೊಡುತ್ತೇನೆ ಎಂದು ಹೇಳಿದವರು 11 ತಿಂಗಳಾದರೂ ಮರಳು ಜನರಿಗೆ ಲಭ್ಯವಾಗಿಸುವಲ್ಲಿ ಸಂಪೂರ್ಣ ವಿಫ‌ಲರಾಗಿದ್ದಾರೆ. ದೋಣಿ ಮತ್ತು ಲಾರಿಗಳಿಗೆ ಹಾಕಿದ ಜಿಪಿಎಸ್‌ ಅನ್ನು ಪ್ರಮೋದ್‌ ಮಧ್ವರಾಜರ ಮನೆಗೆ ತಂದು ಎಸೆಯಿರಿ ಎಂದಿದ್ದಾರೆ. ಜಿಪಿಎಸ್‌ ಜಾರಿಯಾಗಿದ್ದು 2012ರಲ್ಲಿ. ಆಗ ರಘುಪತಿ ಭಟ್ಟರೇ ಶಾಸಕರಾಗಿದ್ದರು. ನಾನು ಶಾಸಕನಾಗಿದ್ದು 2013ರಲ್ಲಿ ಎಂದು ನೆನಪಿಸಿದರು. ಈ ವರ್ಷ ಕೇವಲ 7 ಮರಳು ದಿಬ್ಬಗಳನ್ನು ಗುರುತಿಸಿ ಕೇವಲ 45 ಪರವಾನಿಗೆದಾರರನ್ನು ನೋಂದಾಯಿಸಿ, ಕೇವಲ 17,000 ಟನ್‌ ಮರಳು ಮಾತ್ರ ತೆರವುಗೊಳಿಸಲಾಗಿದೆ ಎಂದರು.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago