Featured

ಮರಳು ಸಮಸ್ಯೆಗೆ ಶಾಶ್ವತ ಪರಿಹಾರಕ್ಕಾಗಿ ಶಕ್ತಿ ಮೀರಿ ಪ್ರಯತ್ನಿಸುತ್ತೇನೆ : ಪ್ರಮೋದ್‌ ಮಧ್ವರಾಜ್‌ – Vishwanews24

ಉಡುಪಿ: ಕೇಂದ್ರ ಸರಕಾರದ ತಪ್ಪು ನೀತಿಯಿಂದ ಇಂದು ಉಡುಪಿ ಜಿಲ್ಲೆಯ ಜನತೆಗೆ ಮರಳು ಲಭಿಸುತ್ತಿಲ್ಲ. ಚುನಾವಣೆಯ ನೀತಿಸಂಹಿತೆ ಜಾರಿಯಲ್ಲಿರುವುದರಿಂದ ಆ ಪ್ರಕ್ರಿಯೆ ಮುಗಿದ ತತ್‌ಕ್ಷಣ ಜಿಲ್ಲಾಧಿಕಾರಿ ನೇತೃತ್ವದ 7 ಜನ ಸದಸ್ಯರ ಸಭೆಯನ್ನು ಕರೆಸಿ ಜಿಲ್ಲೆಯಲ್ಲಿ ರಾಜ್ಯ ಸರಕಾರ ಗುರುತಿಸಿದ 7.38 ಲಕ್ಷ ಟನ್‌ ಮರಳನ್ನು ತೆರವುಗೊಳಿಸಲು ಪರವಾನಿಗೆ ದಾರರನ್ನು ನೇಮಿಸಿ ಜನರಿಗೆ ಮರಳು ಲಭ್ಯವಾಗು ವಂತೆ ಮಾಡುವಲ್ಲಿ ನಾನು ಶಕ್ತಿ ಮೀರಿ ಪ್ರಯತ್ನಿಸುತ್ತೇನೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ಹೇಳಿದರು.

ಅವರು ಕುಂದಾಪುರದಲ್ಲಿ ನಡೆದ ಚುನಾವಣ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.ಹಾರಾಡಿಯ ಕುಕ್ಕುಡೆ ಗ್ರಾಮಸ್ಥರ ಪರವಾಗಿ ಕೆಲವು ಗ್ರಾಮಸ್ಥರು ಅಕ್ರಮ ಮರಳುಗಾರಿಕೆ ವಿರುದ್ಧ ಹಸಿರು ಪೀಠ ನ್ಯಾಯಾಧಿಕರಣಕ್ಕೆ ದೂರು ಸಲ್ಲಿಸಿರುವುದರಿಂದ ಸಿಆರ್‌ಝಡ್‌ ಪ್ರದೇಶದಲ್ಲಿ ಮರಳುಗಾರಿಕೆಗೆ ಹಸಿರು ನ್ಯಾಯಪೀಠ ತಡೆಯಾಜ್ಞೆ ನೀಡಿತ್ತು. ಹಲವು ತಿಂಗಳುಗಳ ಕಾಲ ಮರಳು ಸಿಗದೆ ಕಟ್ಟಡ ಕಾರ್ಮಿಕರಿಗೆ ಮತ್ತು ಜನರಿಗೆ ತುಂಬಾ ತೊಂದರೆ ಆಗಿತ್ತು. ಅದನ್ನು ಮನಗಂಡು ತಾನು ಸಚಿವನಾಗಿದ್ದಾಗ ಆಗಿನ ರಾಜ್ಯದ ಕಾನೂನು ಮಂತ್ರಿ ಟಿ.ಬಿ. ಜಯಚಂದ್ರ ಹಾಗೂ ರಾಜ್ಯ ಸರಕಾರದ ವಕೀಲರಾದ ಅಶೋಕ್‌ ದೇವರಾಜ್‌ ಅವರಲ್ಲಿ ನಿರಂತರ ಸಂಪರ್ಕವಿರಿಸಿ ಸಿಆರ್‌ಝಡ್‌ ಪ್ರದೇಶದಲ್ಲಿ ಮರಳುಗಾರಿಕೆಗೆ ಇದ್ದ ತಡೆಯಾಜ್ಞೆಯನ್ನು ತೆರವುಗೊಳಿಸುವಲ್ಲಿ ಅವಿರತ ಶ್ರಮಪಟ್ಟಿದ್ದೇನೆ. ಅದರ ಫ‌ಲಶ್ರುತಿಯಾಗಿ 2017-18ರಲ್ಲಿ 27 ಮರಳು ದಿಬ್ಬಗಳನ್ನು ಗುರುತಿಸಿ 9 ಲಕ್ಷ ಟನ್‌ ಮರಳು ತೆರವುಗೊಳಿಸುವ ಕಾರ್ಯ ಪ್ರಾರಂಭಗೊಂಡು 165 ಪರವಾನಿಗೆದಾರರನ್ನು ನೋಂದಾಯಿಸಿ ಸುಮಾರು 6 ಲಕ್ಷ ಟನ್‌ ಮರಳು ತೆರವುಗೊಳಿಸಲಾಗಿದೆ ಎಂದು ಪ್ರಮೋದ್‌ ತಿಳಿಸಿದರು.

ಉಡುಪಿ ಜಿಲ್ಲೆಯ ಜನತೆಗೆ ಸಕಾಲದಲ್ಲಿ ಮರಳು ಸಿಗಬೇಕೆಂಬ ನನ್ನ ನಿರ್ಧಾರ ಅಚಲವಾಗಿದೆ. ಕಳೆದ ವಿಧಾನಸಭಾ ಚುನಾವಣೆ ಸಂದರ್ಭ ರಘುಪತಿ ಭಟ್ಟರು ತಾನು ಶಾಸಕನಾದರೆ ಒಂದು ತಿಂಗಳ ಒಳಗೆ ಮನೆ ಬಾಗಿಲಿಗೆ ತಂದು ಮರಳು ಕೊಡುತ್ತೇನೆ ಎಂದು ಹೇಳಿದವರು 11 ತಿಂಗಳಾದರೂ ಮರಳು ಜನರಿಗೆ ಲಭ್ಯವಾಗಿಸುವಲ್ಲಿ ಸಂಪೂರ್ಣ ವಿಫ‌ಲರಾಗಿದ್ದಾರೆ. ದೋಣಿ ಮತ್ತು ಲಾರಿಗಳಿಗೆ ಹಾಕಿದ ಜಿಪಿಎಸ್‌ ಅನ್ನು ಪ್ರಮೋದ್‌ ಮಧ್ವರಾಜರ ಮನೆಗೆ ತಂದು ಎಸೆಯಿರಿ ಎಂದಿದ್ದಾರೆ. ಜಿಪಿಎಸ್‌ ಜಾರಿಯಾಗಿದ್ದು 2012ರಲ್ಲಿ. ಆಗ ರಘುಪತಿ ಭಟ್ಟರೇ ಶಾಸಕರಾಗಿದ್ದರು. ನಾನು ಶಾಸಕನಾಗಿದ್ದು 2013ರಲ್ಲಿ ಎಂದು ನೆನಪಿಸಿದರು. ಈ ವರ್ಷ ಕೇವಲ 7 ಮರಳು ದಿಬ್ಬಗಳನ್ನು ಗುರುತಿಸಿ ಕೇವಲ 45 ಪರವಾನಿಗೆದಾರರನ್ನು ನೋಂದಾಯಿಸಿ, ಕೇವಲ 17,000 ಟನ್‌ ಮರಳು ಮಾತ್ರ ತೆರವುಗೊಳಿಸಲಾಗಿದೆ ಎಂದರು.

 

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

16 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

16 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

16 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

17 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

17 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

17 hours ago