Featured

ಮರಳು ಸಮಸ್ಯೆಗೆ ಶಾಶ್ವತ ಪರಿಹಾರಕ್ಕಾಗಿ ಶಕ್ತಿ ಮೀರಿ ಪ್ರಯತ್ನಿಸುತ್ತೇನೆ : ಪ್ರಮೋದ್‌ ಮಧ್ವರಾಜ್‌ – Vishwanews24

ಉಡುಪಿ: ಕೇಂದ್ರ ಸರಕಾರದ ತಪ್ಪು ನೀತಿಯಿಂದ ಇಂದು ಉಡುಪಿ ಜಿಲ್ಲೆಯ ಜನತೆಗೆ ಮರಳು ಲಭಿಸುತ್ತಿಲ್ಲ. ಚುನಾವಣೆಯ ನೀತಿಸಂಹಿತೆ ಜಾರಿಯಲ್ಲಿರುವುದರಿಂದ ಆ ಪ್ರಕ್ರಿಯೆ ಮುಗಿದ ತತ್‌ಕ್ಷಣ ಜಿಲ್ಲಾಧಿಕಾರಿ ನೇತೃತ್ವದ 7 ಜನ ಸದಸ್ಯರ ಸಭೆಯನ್ನು ಕರೆಸಿ ಜಿಲ್ಲೆಯಲ್ಲಿ ರಾಜ್ಯ ಸರಕಾರ ಗುರುತಿಸಿದ 7.38 ಲಕ್ಷ ಟನ್‌ ಮರಳನ್ನು ತೆರವುಗೊಳಿಸಲು ಪರವಾನಿಗೆ ದಾರರನ್ನು ನೇಮಿಸಿ ಜನರಿಗೆ ಮರಳು ಲಭ್ಯವಾಗು ವಂತೆ ಮಾಡುವಲ್ಲಿ ನಾನು ಶಕ್ತಿ ಮೀರಿ ಪ್ರಯತ್ನಿಸುತ್ತೇನೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ಹೇಳಿದರು.

ಅವರು ಕುಂದಾಪುರದಲ್ಲಿ ನಡೆದ ಚುನಾವಣ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.ಹಾರಾಡಿಯ ಕುಕ್ಕುಡೆ ಗ್ರಾಮಸ್ಥರ ಪರವಾಗಿ ಕೆಲವು ಗ್ರಾಮಸ್ಥರು ಅಕ್ರಮ ಮರಳುಗಾರಿಕೆ ವಿರುದ್ಧ ಹಸಿರು ಪೀಠ ನ್ಯಾಯಾಧಿಕರಣಕ್ಕೆ ದೂರು ಸಲ್ಲಿಸಿರುವುದರಿಂದ ಸಿಆರ್‌ಝಡ್‌ ಪ್ರದೇಶದಲ್ಲಿ ಮರಳುಗಾರಿಕೆಗೆ ಹಸಿರು ನ್ಯಾಯಪೀಠ ತಡೆಯಾಜ್ಞೆ ನೀಡಿತ್ತು. ಹಲವು ತಿಂಗಳುಗಳ ಕಾಲ ಮರಳು ಸಿಗದೆ ಕಟ್ಟಡ ಕಾರ್ಮಿಕರಿಗೆ ಮತ್ತು ಜನರಿಗೆ ತುಂಬಾ ತೊಂದರೆ ಆಗಿತ್ತು. ಅದನ್ನು ಮನಗಂಡು ತಾನು ಸಚಿವನಾಗಿದ್ದಾಗ ಆಗಿನ ರಾಜ್ಯದ ಕಾನೂನು ಮಂತ್ರಿ ಟಿ.ಬಿ. ಜಯಚಂದ್ರ ಹಾಗೂ ರಾಜ್ಯ ಸರಕಾರದ ವಕೀಲರಾದ ಅಶೋಕ್‌ ದೇವರಾಜ್‌ ಅವರಲ್ಲಿ ನಿರಂತರ ಸಂಪರ್ಕವಿರಿಸಿ ಸಿಆರ್‌ಝಡ್‌ ಪ್ರದೇಶದಲ್ಲಿ ಮರಳುಗಾರಿಕೆಗೆ ಇದ್ದ ತಡೆಯಾಜ್ಞೆಯನ್ನು ತೆರವುಗೊಳಿಸುವಲ್ಲಿ ಅವಿರತ ಶ್ರಮಪಟ್ಟಿದ್ದೇನೆ. ಅದರ ಫ‌ಲಶ್ರುತಿಯಾಗಿ 2017-18ರಲ್ಲಿ 27 ಮರಳು ದಿಬ್ಬಗಳನ್ನು ಗುರುತಿಸಿ 9 ಲಕ್ಷ ಟನ್‌ ಮರಳು ತೆರವುಗೊಳಿಸುವ ಕಾರ್ಯ ಪ್ರಾರಂಭಗೊಂಡು 165 ಪರವಾನಿಗೆದಾರರನ್ನು ನೋಂದಾಯಿಸಿ ಸುಮಾರು 6 ಲಕ್ಷ ಟನ್‌ ಮರಳು ತೆರವುಗೊಳಿಸಲಾಗಿದೆ ಎಂದು ಪ್ರಮೋದ್‌ ತಿಳಿಸಿದರು.

ಉಡುಪಿ ಜಿಲ್ಲೆಯ ಜನತೆಗೆ ಸಕಾಲದಲ್ಲಿ ಮರಳು ಸಿಗಬೇಕೆಂಬ ನನ್ನ ನಿರ್ಧಾರ ಅಚಲವಾಗಿದೆ. ಕಳೆದ ವಿಧಾನಸಭಾ ಚುನಾವಣೆ ಸಂದರ್ಭ ರಘುಪತಿ ಭಟ್ಟರು ತಾನು ಶಾಸಕನಾದರೆ ಒಂದು ತಿಂಗಳ ಒಳಗೆ ಮನೆ ಬಾಗಿಲಿಗೆ ತಂದು ಮರಳು ಕೊಡುತ್ತೇನೆ ಎಂದು ಹೇಳಿದವರು 11 ತಿಂಗಳಾದರೂ ಮರಳು ಜನರಿಗೆ ಲಭ್ಯವಾಗಿಸುವಲ್ಲಿ ಸಂಪೂರ್ಣ ವಿಫ‌ಲರಾಗಿದ್ದಾರೆ. ದೋಣಿ ಮತ್ತು ಲಾರಿಗಳಿಗೆ ಹಾಕಿದ ಜಿಪಿಎಸ್‌ ಅನ್ನು ಪ್ರಮೋದ್‌ ಮಧ್ವರಾಜರ ಮನೆಗೆ ತಂದು ಎಸೆಯಿರಿ ಎಂದಿದ್ದಾರೆ. ಜಿಪಿಎಸ್‌ ಜಾರಿಯಾಗಿದ್ದು 2012ರಲ್ಲಿ. ಆಗ ರಘುಪತಿ ಭಟ್ಟರೇ ಶಾಸಕರಾಗಿದ್ದರು. ನಾನು ಶಾಸಕನಾಗಿದ್ದು 2013ರಲ್ಲಿ ಎಂದು ನೆನಪಿಸಿದರು. ಈ ವರ್ಷ ಕೇವಲ 7 ಮರಳು ದಿಬ್ಬಗಳನ್ನು ಗುರುತಿಸಿ ಕೇವಲ 45 ಪರವಾನಿಗೆದಾರರನ್ನು ನೋಂದಾಯಿಸಿ, ಕೇವಲ 17,000 ಟನ್‌ ಮರಳು ಮಾತ್ರ ತೆರವುಗೊಳಿಸಲಾಗಿದೆ ಎಂದರು.

 

Vishwa News 24

Recent Posts

ಉಡುಪಿ:  ಮೇ 12 ರಂದು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 518 ವಿದ್ಯಾರ್ಥಿಗಳಿಗೆ 42 ಲಕ್ಷ ಮೊತ್ತದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ – vishwanews24

ಉಡುಪಿ:  ಮೇ 12 ರಂದು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 518 ವಿದ್ಯಾರ್ಥಿಗಳಿಗೆ 42 ಲಕ್ಷ ಮೊತ್ತದ ವಿದ್ಯಾರ್ಥಿ…

19 seconds ago

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago