ಉಡುಪಿ

ಮರವಂತೆ ಬೀಚ್ ಪ್ರಮುಖ ಪ್ರವಾಸಿ ಕೇಂದ್ರವಾಗಿಸಲು ಯೋಜನೆ

ಉಡುಪಿ : ಉಡುಪಿ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮರವಂತೆ ಬೀಚ್ ಅಭಿವೃದ್ಧಿಗೊಳಿಸುವ ಸಲುವಾಗಿ ಹಲವು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ರಾಷ್ಟ್ರೀಯ ಹೆದ್ದಾರಿ 66 ಹಾದು ಹೋಗುವ ಈ ಪ್ರಕೃತಿ ರಮಣೀಯ ಸ್ಥಳದಲ್ಲಿ ಒಂದು ಕಡೆಯಿಂದ ರಮ್ಯ ಮನೋಹರ ಅರಬ್ಬೀ ಸಾಗರ ಹಾಗೂ ಇನ್ನೊಂದು ಕಡೆಯಿಂದ ಮನಮೋಹಕ ಸೌಪರ್ಣಿಕಾ ನದಿಯನ್ನು ನೋಡುವುದು ಕಣ್ಣಿಗೆ ಒಂದು ಹಬ್ಬ. ಈ ಸ್ಥಳವನ್ನು ಪ್ರಮುಖ ಪ್ರವಾಸಿ ಕೇಂದ್ರವನ್ನಾಗಿಸುವ ಯೋಜನೆಯನ್ನು ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಹಮ್ಮಿಕೊಂಡಿದೆ.

ಮರವಂತೆ-ತ್ರಾಸಿ ಪ್ರದೇಶವನ್ನು ಮೆರೈನ್ ಡ್ರೈವ್ ರೀತಿಯಲ್ಲಿ ಅಭಿವೃದ್ಧಿ ಪಡಿಸುವ ಯೋಚನೆಯಿದೆ. ಇಲ್ಲಿ ನೆಲಕ್ಕೆ ಇಂಟರ್ ಲಾಕ್ ಅಳವಡಿಸಿ ಗ್ರಾನೈಟ್ ಬೆಂಚುಗಳನ್ನೂ ಅಳವಡಿಸಿ ಪ್ರವಾಸಿಗರಿಗೆ ಈ ಸ್ಥಳದ ಸೌಂದರ್ಯವನ್ನು ಆಸ್ವಾದಿಸಲು ಅವಕಾಶವೊದಗಿಸಲಾಗುವುದು ಎಂದು ಉಡುಪಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕಿ ಅನಿತಾ ಬಿ ಆರ್ ತಿಳಿಸಿದ್ದಾರೆ.

ಮರವಂತೆ ಬೀಚಿಗೆ ಸಮೀಪದಲ್ಲಿ ಇಲಾಖೆಯ 1.10 ಎಕರೆ ಪ್ರದೇಶವಿದ್ದು ಇಲ್ಲಿ ಪಾರ್ಕ್ ಸ್ಥಾಪಿಸಲಾಗುವುದಲ್ಲದೆ ಕೋಸ್ಟಲ್ ಸರ್ಕಿಟ್ ಯೋಜನೆಯನ್ವಯ ಪ್ರವಾಸಿಗರಿಗೆ ರೂ 1.36 ಕೋಟಿ ವೆಚ್ಚದಲ್ಲಿ ವಿವಿಧ ಸೌಲಭ್ಯಗಳನ್ನೂ ಒದಗಿಸಲಾಗುವುದು. ಈ ಉದ್ದೇಶಕ್ಕಾಗಿ ಕರ್ನಾಟಕ ಗ್ರಾಮೀಣ ಮೂಲಭೂತಸೌಕರ್ಯ ಅಭಿವೃದ್ಧಿ ನಿಯಮಿತ ಆರ್ಥಿಕ ನೆರವು ಬಿಡುಗಡೆಗೊಳಿಸಿದೆ. ಜೀವರಕ್ಷಕರನ್ನು ಹೊಂದಿರುವ ವಾಚ್ ಟವರ್ ಒಂದನ್ನೂ ಸ್ಥಾಪಿಸಲಾಗುವುದು. ಆಹಾರದ ಮಳಿಗೆಗಳನ್ನೂ ತೆರೆಯುವ ಯೋಚನೆಯಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಹೆದ್ದಾರಿಯ ಇನ್ನೊಂದು ಭಾಗದಲ್ಲಿ ಸೌಪರ್ಣಿಕಾ ನದಿ ದಂಡೆ ಸಮೀಪ ಸರಕಾರದ 13.12 ಎಕ್ರೆ ಭೂಮಿಯಿದ್ದು ಇಲ್ಲಿ ಪ್ರವಾಸಿ ಮಾಹಿತಿ ಕೇಂದ್ರ, ಫುಡ್ ಕೋರ್ಟ್ ಮತ್ತಿರ ಸೌಲಭ್ಯಗಳು ರೂ 6 ಕೋಟಿ ವೆಚ್ಚದಲ್ಲಿ ತಲೆಯೆತ್ತಲಿವೆ.

ಕೇಂದ್ರ ಸರಕಾರದ ಸ್ವದೇಶ್ ದರ್ಶನ್ ಯೋಜನೆಯನ್ವಯ ಜಲಕ್ರೀಡೆಗಳಿಗಾಗಿಯೂ ರೂ 1.84 ಕೋಟಿ ಒದಗಿಸಲಾಗಿದೆ. ಈ ವರ್ಷದ ಸೆಪ್ಟೆಂಬರ್ ತಿಂಗಳೊಳಗಾಗಿ ಹೌಸ್ ಬೋಟ್ ಹಾಗೂ ತೇಲುವ ರೆಸ್ಟಾರೆಂಟ್ ಕೂಡ ಆರಂಭಿಸಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago