ಉಡುಪಿ

ಮರವಂತೆ ಬೀಚ್ ಪ್ರಮುಖ ಪ್ರವಾಸಿ ಕೇಂದ್ರವಾಗಿಸಲು ಯೋಜನೆ

ಉಡುಪಿ : ಉಡುಪಿ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮರವಂತೆ ಬೀಚ್ ಅಭಿವೃದ್ಧಿಗೊಳಿಸುವ ಸಲುವಾಗಿ ಹಲವು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ರಾಷ್ಟ್ರೀಯ ಹೆದ್ದಾರಿ 66 ಹಾದು ಹೋಗುವ ಈ ಪ್ರಕೃತಿ ರಮಣೀಯ ಸ್ಥಳದಲ್ಲಿ ಒಂದು ಕಡೆಯಿಂದ ರಮ್ಯ ಮನೋಹರ ಅರಬ್ಬೀ ಸಾಗರ ಹಾಗೂ ಇನ್ನೊಂದು ಕಡೆಯಿಂದ ಮನಮೋಹಕ ಸೌಪರ್ಣಿಕಾ ನದಿಯನ್ನು ನೋಡುವುದು ಕಣ್ಣಿಗೆ ಒಂದು ಹಬ್ಬ. ಈ ಸ್ಥಳವನ್ನು ಪ್ರಮುಖ ಪ್ರವಾಸಿ ಕೇಂದ್ರವನ್ನಾಗಿಸುವ ಯೋಜನೆಯನ್ನು ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಹಮ್ಮಿಕೊಂಡಿದೆ.

ಮರವಂತೆ-ತ್ರಾಸಿ ಪ್ರದೇಶವನ್ನು ಮೆರೈನ್ ಡ್ರೈವ್ ರೀತಿಯಲ್ಲಿ ಅಭಿವೃದ್ಧಿ ಪಡಿಸುವ ಯೋಚನೆಯಿದೆ. ಇಲ್ಲಿ ನೆಲಕ್ಕೆ ಇಂಟರ್ ಲಾಕ್ ಅಳವಡಿಸಿ ಗ್ರಾನೈಟ್ ಬೆಂಚುಗಳನ್ನೂ ಅಳವಡಿಸಿ ಪ್ರವಾಸಿಗರಿಗೆ ಈ ಸ್ಥಳದ ಸೌಂದರ್ಯವನ್ನು ಆಸ್ವಾದಿಸಲು ಅವಕಾಶವೊದಗಿಸಲಾಗುವುದು ಎಂದು ಉಡುಪಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕಿ ಅನಿತಾ ಬಿ ಆರ್ ತಿಳಿಸಿದ್ದಾರೆ.

ಮರವಂತೆ ಬೀಚಿಗೆ ಸಮೀಪದಲ್ಲಿ ಇಲಾಖೆಯ 1.10 ಎಕರೆ ಪ್ರದೇಶವಿದ್ದು ಇಲ್ಲಿ ಪಾರ್ಕ್ ಸ್ಥಾಪಿಸಲಾಗುವುದಲ್ಲದೆ ಕೋಸ್ಟಲ್ ಸರ್ಕಿಟ್ ಯೋಜನೆಯನ್ವಯ ಪ್ರವಾಸಿಗರಿಗೆ ರೂ 1.36 ಕೋಟಿ ವೆಚ್ಚದಲ್ಲಿ ವಿವಿಧ ಸೌಲಭ್ಯಗಳನ್ನೂ ಒದಗಿಸಲಾಗುವುದು. ಈ ಉದ್ದೇಶಕ್ಕಾಗಿ ಕರ್ನಾಟಕ ಗ್ರಾಮೀಣ ಮೂಲಭೂತಸೌಕರ್ಯ ಅಭಿವೃದ್ಧಿ ನಿಯಮಿತ ಆರ್ಥಿಕ ನೆರವು ಬಿಡುಗಡೆಗೊಳಿಸಿದೆ. ಜೀವರಕ್ಷಕರನ್ನು ಹೊಂದಿರುವ ವಾಚ್ ಟವರ್ ಒಂದನ್ನೂ ಸ್ಥಾಪಿಸಲಾಗುವುದು. ಆಹಾರದ ಮಳಿಗೆಗಳನ್ನೂ ತೆರೆಯುವ ಯೋಚನೆಯಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಹೆದ್ದಾರಿಯ ಇನ್ನೊಂದು ಭಾಗದಲ್ಲಿ ಸೌಪರ್ಣಿಕಾ ನದಿ ದಂಡೆ ಸಮೀಪ ಸರಕಾರದ 13.12 ಎಕ್ರೆ ಭೂಮಿಯಿದ್ದು ಇಲ್ಲಿ ಪ್ರವಾಸಿ ಮಾಹಿತಿ ಕೇಂದ್ರ, ಫುಡ್ ಕೋರ್ಟ್ ಮತ್ತಿರ ಸೌಲಭ್ಯಗಳು ರೂ 6 ಕೋಟಿ ವೆಚ್ಚದಲ್ಲಿ ತಲೆಯೆತ್ತಲಿವೆ.

ಕೇಂದ್ರ ಸರಕಾರದ ಸ್ವದೇಶ್ ದರ್ಶನ್ ಯೋಜನೆಯನ್ವಯ ಜಲಕ್ರೀಡೆಗಳಿಗಾಗಿಯೂ ರೂ 1.84 ಕೋಟಿ ಒದಗಿಸಲಾಗಿದೆ. ಈ ವರ್ಷದ ಸೆಪ್ಟೆಂಬರ್ ತಿಂಗಳೊಳಗಾಗಿ ಹೌಸ್ ಬೋಟ್ ಹಾಗೂ ತೇಲುವ ರೆಸ್ಟಾರೆಂಟ್ ಕೂಡ ಆರಂಭಿಸಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

16 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

16 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

17 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

17 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

18 hours ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

19 hours ago