ಉಡುಪಿ

ಮರವಂತೆ ಬೀಚ್ ಪ್ರಮುಖ ಪ್ರವಾಸಿ ಕೇಂದ್ರವಾಗಿಸಲು ಯೋಜನೆ

ಉಡುಪಿ : ಉಡುಪಿ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮರವಂತೆ ಬೀಚ್ ಅಭಿವೃದ್ಧಿಗೊಳಿಸುವ ಸಲುವಾಗಿ ಹಲವು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ರಾಷ್ಟ್ರೀಯ ಹೆದ್ದಾರಿ 66 ಹಾದು ಹೋಗುವ ಈ ಪ್ರಕೃತಿ ರಮಣೀಯ ಸ್ಥಳದಲ್ಲಿ ಒಂದು ಕಡೆಯಿಂದ ರಮ್ಯ ಮನೋಹರ ಅರಬ್ಬೀ ಸಾಗರ ಹಾಗೂ ಇನ್ನೊಂದು ಕಡೆಯಿಂದ ಮನಮೋಹಕ ಸೌಪರ್ಣಿಕಾ ನದಿಯನ್ನು ನೋಡುವುದು ಕಣ್ಣಿಗೆ ಒಂದು ಹಬ್ಬ. ಈ ಸ್ಥಳವನ್ನು ಪ್ರಮುಖ ಪ್ರವಾಸಿ ಕೇಂದ್ರವನ್ನಾಗಿಸುವ ಯೋಜನೆಯನ್ನು ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಹಮ್ಮಿಕೊಂಡಿದೆ.

ಮರವಂತೆ-ತ್ರಾಸಿ ಪ್ರದೇಶವನ್ನು ಮೆರೈನ್ ಡ್ರೈವ್ ರೀತಿಯಲ್ಲಿ ಅಭಿವೃದ್ಧಿ ಪಡಿಸುವ ಯೋಚನೆಯಿದೆ. ಇಲ್ಲಿ ನೆಲಕ್ಕೆ ಇಂಟರ್ ಲಾಕ್ ಅಳವಡಿಸಿ ಗ್ರಾನೈಟ್ ಬೆಂಚುಗಳನ್ನೂ ಅಳವಡಿಸಿ ಪ್ರವಾಸಿಗರಿಗೆ ಈ ಸ್ಥಳದ ಸೌಂದರ್ಯವನ್ನು ಆಸ್ವಾದಿಸಲು ಅವಕಾಶವೊದಗಿಸಲಾಗುವುದು ಎಂದು ಉಡುಪಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕಿ ಅನಿತಾ ಬಿ ಆರ್ ತಿಳಿಸಿದ್ದಾರೆ.

ಮರವಂತೆ ಬೀಚಿಗೆ ಸಮೀಪದಲ್ಲಿ ಇಲಾಖೆಯ 1.10 ಎಕರೆ ಪ್ರದೇಶವಿದ್ದು ಇಲ್ಲಿ ಪಾರ್ಕ್ ಸ್ಥಾಪಿಸಲಾಗುವುದಲ್ಲದೆ ಕೋಸ್ಟಲ್ ಸರ್ಕಿಟ್ ಯೋಜನೆಯನ್ವಯ ಪ್ರವಾಸಿಗರಿಗೆ ರೂ 1.36 ಕೋಟಿ ವೆಚ್ಚದಲ್ಲಿ ವಿವಿಧ ಸೌಲಭ್ಯಗಳನ್ನೂ ಒದಗಿಸಲಾಗುವುದು. ಈ ಉದ್ದೇಶಕ್ಕಾಗಿ ಕರ್ನಾಟಕ ಗ್ರಾಮೀಣ ಮೂಲಭೂತಸೌಕರ್ಯ ಅಭಿವೃದ್ಧಿ ನಿಯಮಿತ ಆರ್ಥಿಕ ನೆರವು ಬಿಡುಗಡೆಗೊಳಿಸಿದೆ. ಜೀವರಕ್ಷಕರನ್ನು ಹೊಂದಿರುವ ವಾಚ್ ಟವರ್ ಒಂದನ್ನೂ ಸ್ಥಾಪಿಸಲಾಗುವುದು. ಆಹಾರದ ಮಳಿಗೆಗಳನ್ನೂ ತೆರೆಯುವ ಯೋಚನೆಯಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಹೆದ್ದಾರಿಯ ಇನ್ನೊಂದು ಭಾಗದಲ್ಲಿ ಸೌಪರ್ಣಿಕಾ ನದಿ ದಂಡೆ ಸಮೀಪ ಸರಕಾರದ 13.12 ಎಕ್ರೆ ಭೂಮಿಯಿದ್ದು ಇಲ್ಲಿ ಪ್ರವಾಸಿ ಮಾಹಿತಿ ಕೇಂದ್ರ, ಫುಡ್ ಕೋರ್ಟ್ ಮತ್ತಿರ ಸೌಲಭ್ಯಗಳು ರೂ 6 ಕೋಟಿ ವೆಚ್ಚದಲ್ಲಿ ತಲೆಯೆತ್ತಲಿವೆ.

ಕೇಂದ್ರ ಸರಕಾರದ ಸ್ವದೇಶ್ ದರ್ಶನ್ ಯೋಜನೆಯನ್ವಯ ಜಲಕ್ರೀಡೆಗಳಿಗಾಗಿಯೂ ರೂ 1.84 ಕೋಟಿ ಒದಗಿಸಲಾಗಿದೆ. ಈ ವರ್ಷದ ಸೆಪ್ಟೆಂಬರ್ ತಿಂಗಳೊಳಗಾಗಿ ಹೌಸ್ ಬೋಟ್ ಹಾಗೂ ತೇಲುವ ರೆಸ್ಟಾರೆಂಟ್ ಕೂಡ ಆರಂಭಿಸಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago