Featured

ಮರೆಯಾದ ಬಾಲಿವುಡ್ ದಿಗ್ಗಜ ದಿಲೀಪ್ ಕುಮಾರ್; ಪ್ರಧಾನಿ ಸೇರಿದಂತೆ ಅನೇಕ ಗಣ್ಯರ ಸಂತಾಪ -Vishwanews24

ಮರೆಯಾದ ಬಾಲಿವುಡ್ ದಿಗ್ಗಜ ದಿಲೀಪ್ ಕುಮಾರ್; ಪ್ರಧಾನಿ ಸೇರಿದಂತೆ ಅನೇಕ ಗಣ್ಯರ ಸಂತಾಪ -Vishwanews24

ಮುಂಬೈ: ಬಾಲಿವುಡ್‌ನ ಹಿರಿಯ ನಟ ದಿಲೀಪ್ ಕುಮಾರ್ (98) ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ದೀರ್ಘಕಾಲ ಅನಾರೋಗ್ಯಕ್ಕೆ ಒಳಗಾಗಿದ್ದ ದಿಲೀಪ್ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡು ಮುಂಬೈನ ಪಿ.ಡಿ. ಹಿಂದೂಜಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಬುಧವಾರ ನಿಧರರಾದರು ಎಂದು ವೈದ್ಯರು ತಿಳಿಸಿದ್ದಾರೆ.

ಹಿಂದಿ ಸೇರಿದಂತೆ ಭಾರತೀಯ ಚಿತ್ರರಂಗಕ್ಕೆ ದಿಲೀಪ್ ಕುಮಾರ್ ನೀಡಿರುವ ಕೊಡುಗೆಗಳನ್ನು ಗಣ್ಯರು ಸ್ಮರಿಸಿದ್ದಾರೆ.

‘ದಿಲೀಪ್ ಕುಮಾರ್ ‘ಭಾರತೀಯ ಸಿನಿಮಾದ ದಿಗ್ಗಜ’ರಾಗಿ ನೆನಪಿನಲ್ಲಿ ಉಳಿಯುತ್ತಾರೆ. ಸರಿಸಾಟಿಯಿಲ್ಲದ ಪ್ರತಿಭೆಯ ನಟರಾಗಿ ಅನುಗ್ರಹಿತರಾಗಿದ್ದವರು. ಈ ಕಾರಣದಿಂದಾಗಿ ತಲೆಮಾರುಗಳ ಅಭಿಮಾನಿಗಳ ಬಳಗವನ್ನು ಹೊಂದಿದ್ದರು. ಅವರ ನಿಧನದಿಂದ ನಮ್ಮ ಸಾಂಸ್ಕೃತಿಕ ಜಗತ್ತಿಗೆ ಅಪಾರ ನಷ್ಟವಾಗಿದೆ. ಈ ಸಂದರ್ಭದಲ್ಲಿ ಅವರ ಕುಟುಂಬ, ಸ್ನೇಹಿತರು ಹಾಗೂ ಅಸಂಖ್ಯಾತ ಅಭಿಮಾನಿಗಳಿಗೆ ಸಂತಾಪ ಸೂಚಿಸುತ್ತಿದ್ದೇನೆ’ ಎಂದು ಪ್ರಧಾನಿ ಮಂತ್ರಿ ತಿಳಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಸಹ ದಿಲೀಪ್ ಕುಮಾರ್ ‘ಬೆಳ್ಳಿ ಪರದೆಯ ನಿಜವಾದ ದಿಗ್ಗಜ’ ಎಂದು ಹೇಳಿದ್ದಾರೆ. ‘ಭಾರತೀಯ ಚಿತ್ರರಂಗಕ್ಕೆ ಶ್ರೇಷ್ಠ ನಾಯಕರೊಬ್ಬರ ನಷ್ಟವಾಗಿದೆ. ಅದ್ಭುತ ನಟನೆ ಹಾಗೂ ಅಪ್ರತಿಮ ಪಾತ್ರಗಳಿಂದ ತಲೆಮಾರಿಂದ ತಲೆಮಾರಿನ ಸಿನಿಮಾ ಪ್ರಿಯರನ್ನು ರಂಜಿಸಿದ್ದಾರೆ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು’ ಎಂದು ತಿಳಿಸಿದ್ದಾರೆ.

‘ದಿಲೀಪ್ ಕುಮಾರ್ ಭಾರತೀಯ ಚಿತ್ರರಂಗಕ್ಕೆ ನೀಡಿರುವ ಅಸಾಧಾರಣ ಕೊಡುಗೆಗಾಗಿ ಮುಂದಿನ ಪೀಳಿಗೆಯು ಸದಾ ನೆನಪಿನಲ್ಲಿಟ್ಟುಕೊಳ್ಳಲಿದೆ. ದಿಲೀಪ್ ಕುಮಾರ್ ನಿಧನಕ್ಕೆ ಅವರ ಕುಟುಂಬ, ಸ್ನೇಹಿತರು ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ.

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

3 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

3 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

3 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

4 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

4 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

4 hours ago