ಮುಂಬೈ: ಬಾಲಿವುಡ್ನ ಹಿರಿಯ ನಟ ದಿಲೀಪ್ ಕುಮಾರ್ (98) ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
ದೀರ್ಘಕಾಲ ಅನಾರೋಗ್ಯಕ್ಕೆ ಒಳಗಾಗಿದ್ದ ದಿಲೀಪ್ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡು ಮುಂಬೈನ ಪಿ.ಡಿ. ಹಿಂದೂಜಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಬುಧವಾರ ನಿಧರರಾದರು ಎಂದು ವೈದ್ಯರು ತಿಳಿಸಿದ್ದಾರೆ.
ಹಿಂದಿ ಸೇರಿದಂತೆ ಭಾರತೀಯ ಚಿತ್ರರಂಗಕ್ಕೆ ದಿಲೀಪ್ ಕುಮಾರ್ ನೀಡಿರುವ ಕೊಡುಗೆಗಳನ್ನು ಗಣ್ಯರು ಸ್ಮರಿಸಿದ್ದಾರೆ.
‘ದಿಲೀಪ್ ಕುಮಾರ್ ‘ಭಾರತೀಯ ಸಿನಿಮಾದ ದಿಗ್ಗಜ’ರಾಗಿ ನೆನಪಿನಲ್ಲಿ ಉಳಿಯುತ್ತಾರೆ. ಸರಿಸಾಟಿಯಿಲ್ಲದ ಪ್ರತಿಭೆಯ ನಟರಾಗಿ ಅನುಗ್ರಹಿತರಾಗಿದ್ದವರು. ಈ ಕಾರಣದಿಂದಾಗಿ ತಲೆಮಾರುಗಳ ಅಭಿಮಾನಿಗಳ ಬಳಗವನ್ನು ಹೊಂದಿದ್ದರು. ಅವರ ನಿಧನದಿಂದ ನಮ್ಮ ಸಾಂಸ್ಕೃತಿಕ ಜಗತ್ತಿಗೆ ಅಪಾರ ನಷ್ಟವಾಗಿದೆ. ಈ ಸಂದರ್ಭದಲ್ಲಿ ಅವರ ಕುಟುಂಬ, ಸ್ನೇಹಿತರು ಹಾಗೂ ಅಸಂಖ್ಯಾತ ಅಭಿಮಾನಿಗಳಿಗೆ ಸಂತಾಪ ಸೂಚಿಸುತ್ತಿದ್ದೇನೆ’ ಎಂದು ಪ್ರಧಾನಿ ಮಂತ್ರಿ ತಿಳಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಸಹ ದಿಲೀಪ್ ಕುಮಾರ್ ‘ಬೆಳ್ಳಿ ಪರದೆಯ ನಿಜವಾದ ದಿಗ್ಗಜ’ ಎಂದು ಹೇಳಿದ್ದಾರೆ. ‘ಭಾರತೀಯ ಚಿತ್ರರಂಗಕ್ಕೆ ಶ್ರೇಷ್ಠ ನಾಯಕರೊಬ್ಬರ ನಷ್ಟವಾಗಿದೆ. ಅದ್ಭುತ ನಟನೆ ಹಾಗೂ ಅಪ್ರತಿಮ ಪಾತ್ರಗಳಿಂದ ತಲೆಮಾರಿಂದ ತಲೆಮಾರಿನ ಸಿನಿಮಾ ಪ್ರಿಯರನ್ನು ರಂಜಿಸಿದ್ದಾರೆ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು’ ಎಂದು ತಿಳಿಸಿದ್ದಾರೆ.
‘ದಿಲೀಪ್ ಕುಮಾರ್ ಭಾರತೀಯ ಚಿತ್ರರಂಗಕ್ಕೆ ನೀಡಿರುವ ಅಸಾಧಾರಣ ಕೊಡುಗೆಗಾಗಿ ಮುಂದಿನ ಪೀಳಿಗೆಯು ಸದಾ ನೆನಪಿನಲ್ಲಿಟ್ಟುಕೊಳ್ಳಲಿದೆ. ದಿಲೀಪ್ ಕುಮಾರ್ ನಿಧನಕ್ಕೆ ಅವರ ಕುಟುಂಬ, ಸ್ನೇಹಿತರು ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…