ಉಡುಪಿ :ಮಲಬಾರ್ ಗೋಲ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ‘ಆರ್ಟಿಸ್ಟ್ರಿ’ ಕಲಾತ್ಮಕ ಚಿನ್ನಾಭರಣಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳವು ಮಾರ್ಚ್ 6 ರಿಂದ ಮಾ.14 ರವರೆಗೆ ನಡೆಯುತ್ತಿದೆ . ಆರ್ಟಸ್ಟ್ರಿ ಕಲಾತ್ಮಕ ಚಿನ್ನಾಭರಣ ಪ್ರದರ್ಶನದಲ್ಲಿ ವಿವಿಧ ನಮೂನೆಯ ಚಿನ್ನ ಮತ್ತು ವಜ್ರಾಭರಣಗಳ ಸಂಗ್ರಹಗಳು ಪ್ರದರ್ಶನದಲ್ಲಿವೆ. ‘ ಮೈನ್’ನಲ್ಲಿ ವಜ್ರಾಭರಣಗಳ ಅಭೂತ ಪೂರ್ವ ಸಂಗ್ರಹ, ನವವಧುವಿನ ವಿಶಿಷ್ಟ ಸಂಗ್ರಹ ಹಾಗೂ ಪ್ರಮಾಣಿಕೃತ ವಜ್ರಾಭಾರಣಗಳಿದ್ದು ,’ ಡಿವೈನ್’ನಲ್ಲಿ ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಚಿನ್ನಾಭರಣಗಳ ಸಂಗ್ರಹವಿದೆ . ‘ ಪ್ರಶಿ’ಯಲ್ಲಿ ರುಬಿ , ಎಮರಾಲ್ ಅಮೂಲ್ಯ ಹರಳುಗಳ ಸಮಕಾಲೀನ ಚಿನ್ನಾಭರಣಗಳ ಸಂಗ್ರಹವಿದ್ದು , ‘ ಎಥಿನಿಕ್ಸ್’ನಲ್ಲಿ ಕೈಕುಶಲತೆಯ ಸೊಬಗಿನ ಪಾರಂಪರಿಕ ಚಿನ್ನಾಭರಣಗಳ ಪ್ರದರ್ಶನ ಹಾಗೂ ಮಾರಾಟವಿದೆ . ‘ ಏರ ‘ ಅನ್ನಟ್ ಡೈಮಂಡ್ಸ್ ಹಾಗೂ ಚಿನ್ನಾಭರಣಗಳ ಅಪೂರ್ವ ಸಂಗ್ರಹವಾದರೆ ‘ ಹಾಯ್ ‘ ಯಲ್ಲಿ ಯುವತಿಯರ ಮನಸೆಳೆಯುವ ಮನಮೋಹಕ ಆಭರಣಗಳಿವೆ . ‘ ಸ್ಟಾರ್ಲೆಟ್’ನಲ್ಲಿ ಚಿಕ್ಕ ಮಕ್ಕಳಿಗಾಗಿ ಅತ್ಯಾಕರ್ಷಕ ವಿನ್ಯಾಸಗಳಿಂದ ಕೂಡಿದ ಚಿನ್ನಾಭರಣಗಳು ಈ ಪ್ರದರ್ಶನದ ವಿಶೇಷವಾಗಿದೆ . ಈ ಪ್ರದರ್ಶನ ಹಾಗೂ ಮಾರಾಟ ಮೇಳದಲ್ಲಿ ಸಂಪೂರ್ಣ ಪಾರದರ್ಶಕ , ಉಚಿತ ನಿರ್ವಹಣೆ , ವಿನಿಮಯದಲ್ಲಿ ಶೂನ್ಯ ಕಡಿತ , ಬೈಬ್ಯಾಕ್ ಗ್ಯಾರಂಟಿ , ಉಚಿತ ವಿಮೆ , ಎಲ್ಲಾ ಆಭರಣಗಳು ಸಹ ಹಾಲ್ ಮಾರ್ಕ್ ಹೊಂದಿದ್ದು , 28 ರೀತಿಯ ಪರೀಕ್ಷೆ ಮಾಡಿದ ವಜ್ರಾಭರಣಗಳು ಮಲಬಾರ್ ಗೋಲ್ ಆ್ಯಂಡ್ ಡೈಮಂಡ್ಸ್ನ ವಿಶೇಷತೆಗಳಾಗಿವೆ ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ . ಈ ಸಂದರ್ಭದಲ್ಲಿ ಗ್ರಾಹಕರಿಗೆ ಭಾರತದಾದ್ಯಂತ ಚಿನ್ನಾಭರಣಗಳಿಗೆ ಒನ್ ಇಂಡಿಯಾ ಒನ್ ಗೋಲ್ಡ್ ರೇಟ್ , ಶುದ್ಧ ಚಿನ್ನ ಸುಂದರ ವಿನ್ಯಾಸಗಳು ನ್ಯಾಯ ಸಮ್ಮತವಾದ ತಯಾರಿಕಾ ಶುಲ್ಕ ಇದು ನ್ಯಾಯಯುತ ಬೆಲೆಯ ಭರವಸೆ, ಬ್ರಾಂಡೆಡ್ ವಾಚ್ಗಳ ಮೇಲೆ ವಿಶೇಷ ಕಡಿತ ನೀಡಲಾಗುವುದು ಎಂದು ಪತ್ರರಿಕಾಗೋಷ್ಠಿಯಲ್ಲಿ ಸಂಸ್ಥೆಯ ಮ್ಯಾನೇಜರ್ ರಾಘವೇಂದ್ರ ನಾಯಕ್ ತಿಳಿಸಿದ್ದಾರೆ.
ಈ ಸಂಧರ್ಭದಲ್ಲಿ ಮಲಬಾರ್ ಚಾರಿಟೇಬಲ್ ಟ್ರಸ್ಟ್ನ ಮ್ಯಾನೇಜರ್ ತಂಜ್ಞಿಲ್ ಉಪಸ್ಥಿತರಿದ್ದರು.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…