Featured

ಮಲಯಾಳಂ ಖ್ಯಾತ ನಟ ಇನೋಸೆಂಟ್ ನಿಧನ – Vishwanews24

ಮಲಯಾಳಂ ಖ್ಯಾತ ನಟ ಇನೋಸೆಂಟ್ ನಿಧನ

ಕೊಚ್ಚಿ : ಮಲಯಾಳಂ ಖ್ಯಾತ ನಟ, ಮಾಜಿ ಲೋಕಸಭಾ ಸದಸ್ಯ ಇನೋಸೆಂಟ್ ಅವರು ಮಾರ್ಚ್ 26ರ ಭಾನುವಾರ ನಿಧನರಾಗಿದ್ದಾರೆ. 75 ವರ್ಷದ ಇವರು ಅನಾರೋಗ್ಯಕ್ಕೀಡಾದ ಹಿನ್ನಲೆ ಕೊಚ್ಚಿಯ ಆಸ್ಪತ್ರೆಗೆ ದಾಖಲಾಗಿದ್ದರು.

ಇನೋಸೆಂಟ್ ಅವರಿಗೆ 2012ರಲ್ಲಿ ಕ್ಯಾನ್ಸರ್ ಕಾಯಿಲೆ ತಗುಲಿತ್ತು. 3 ವರ್ಷಗಳ ನಂತರದಲ್ಲಿ ಅವರು ಕ್ಯಾನ್ಸರ್‌ ವಿರುದ್ಧ ಹೋರಾಟ ಮಾಡಿ ಗೆದ್ದಿದ್ದರು.ಕೊರೊನಾ ಕಾಯಿಲೆಗೂ ತುತ್ತಾಗಿದ್ದ ಇವರು ಬಹು ಅಂಗಾಂಗ ವೈಫಲ್ಯಕ್ಕೀಡಾಗಿದ್ದರು ಎಂದು ಆಸ್ಪತ್ರೆ ವರದಿ ತಿಳಿಸಿದೆ.

ಇನೋಸೆಂಟ್ ಅವರು ಸ್ವತಂತ್ರ ಅಭ್ಯರ್ಥಿಯಾಗಿ 2014ರ ಲೋಕಸಭೆ ಚುನಾವಣೆ (ಛಲಕ್ಕುಡಿ ಕ್ಷೇತ್ರ) ಗೆದ್ದಿದ್ದರು. 1948ರಲ್ಲಿ ಜನಿಸಿದ ಇನೋಸೆಂಟ್ ಅವರು 1972ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟಿದ್ದರು. 4 ದಶಕಗಳ ಕಾಲ ನೂರಾರು ಸಿನಿಮಾದಲ್ಲಿ ಹಾಸ್ಯ ಪಾತ್ರದಲ್ಲಿ ನಟಿಸಿ ಮಿಂಚಿದ್ದರು. ಇನ್ನು ರಿಲೀಸ್‌ ಆಗಲಿರುವ ಫಾಹದ್‌ ಫಾಸಿಲ್‌ ಅವರ ʼಪಾಚುವುಂ ಅದ್ಭುತವಿಳಕ್ಕುಂʼ ಸಿನಿಮಾದಲ್ಲೂ ಬಣ್ಣ ಹಚ್ಚಿದ್ದಾರೆ.

Vishwa News 24

Recent Posts

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

5 minutes ago

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

2 hours ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

2 hours ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

2 hours ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

2 hours ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

3 hours ago