Featured

ಮಲಯಾಳಂ ಸಿನಿಮಾ ರಂಗದ ಜನಪ್ರಿಯ ಹಾಸ್ಯನಟ ಮಾಮುಕೋಯ ನಿಧನ – Vishwanews24

ಮಲಯಾಳಂ ಸಿನಿಮಾ ರಂಗದ ಜನಪ್ರಿಯ ಹಾಸ್ಯನಟ ಮಾಮುಕೋಯ ನಿಧನ

ಮಲಯಾಳಂ ಸಿನಿಮಾ ರಂಗದ ಜನಪ್ರಿಯ ಹಾಸ್ಯನಟ ಮಾಮುಕೋಯ ನಿಧನ
ಕೋಝಿಕ್ಕೋಡ್: ಮಲಯಾಳಂ ಸಿನಿಮಾ ರಂಗದ ದಿಗ್ಗಜ ನಟ ಮಾಮುಕೋಯ (76) ಬುಧವಾರ ಮಧ್ಯಾಹ್ನ ( ಎ.26 ರಂದು) ನಿಧನರಾಗಿದ್ದಾರೆ.

ಇತ್ತೀಚೆಗೆ ಮಲಪ್ಪುರಂಗೆ ಫುಟ್‌ ಬಾಲ್ ಪಂದ್ಯಾಕೂಟವೊಂದನ್ನು ಉದ್ಘಾಟನೆ ಮಾಡಲು ಬಂದಿದ್ದ ವೇಳೆ ಅವರು ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರ ಆರೋಗ್ಯ ಮೊದಲಿಗೆ ಸ್ಥಿರವಾಗಿತ್ತು. ಆದರೆ ಆ ಬಳಿಕ ಆರೋಗ್ಯ ಮತ್ತಷ್ಟು ಹದಗೆಟ್ಟು, ಬೇರೊಂದು ಆಸ್ಪತ್ರಗೆ ದಾಖಲು ಮಾಡಲಾಗಿತ್ತು, ಅಲ್ಲಿ ವೆಂಟಿಲೇಟರ್‌ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಬುಧವಾರ ಮಧ್ಯಾಹ್ನ 1:05 ರ ಸುಮಾರಿಗೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.

1946 ರಲ್ಲಿ ಹುಟ್ಟಿದ ಅವರು, ಮೊದಲಿಗೆ ರಂಗಭೂಮಿ ಕಲಾವಿದರಾಗಿ ನಟನೆ ಆರಂಭಿಸಿದ್ದರು. ಆ ಬಳಿಕ 1979 ರಲ್ಲಿ ನಿಲಂಬೂರ್ ಬಾಲನ್ ನಿರ್ದೇಶನದ ‘ಅನ್ಯಾರುಡೆ ಭೂಮಿ’ ಚಿತ್ರದ ಮೂಲಕ ಮಾಲಿವುಡ್‌ಗೆ ಪಾದಾರ್ಪಣೆ ಮಾಡಿದರು.

ʼದೂರೆ ದೂರೆ ಓರು ಕೂಡು ಕೂಟಂ’, ‘ಗಾಂಧಿನಗರ್ ಸೆಕೆಂಡ್‌ ಸ್ಟ್ರೀಟ್‌, ‘ನಾಡೋಡಿಕ್ಕಟ್ಟು’, ‘ಪಟ್ಟಣಪ್ರವೇಶಂʼ,‘ಉನ್ನಿಕಲೆ ಒರು ಕಧ ಪಾರಾಯಂʼ ‘ವಡಕ್ಕುನೋಕ್ಕಿಯಂʼ, ʼಉಸ್ತಾದ್‌ ಹೊಟೇಲ್‌ʼ, ‘ಇಂಡಿಯನ್‌ ರೂಪೀಸ್,’ ‘ಮಿನ್ನಲ್ ಮುರಳಿʼ, ‘ಕುರುತಿʼ, ‘ತೀರ್ಪ್ಪು ಹೀಗೆ ಸುಮಾರು 450 ಚಿತ್ರಗಳಲ್ಲಿ ಅವರು ನಟಿಸಿದ್ದಾರೆ.

ಹಾಸ್ಯಪಾತ್ರಗಳಿಂದಲೇ ಗಮನ ಸೆಳೆದ ಅವರು ಎರಡು ಬಾರಿ ತಮ್ಮ ನಟನೆಗೆ ಕೇರಳ ಸ್ಟೇಟ್‌ ಅವಾರ್ಡ್ ನ್ನು ಪಡೆದುಕೊಂಡಿದ್ದಾರೆ. ( ʼಪೆರುಮಝಕ್ಕಲಂʼ ಮತ್ತು ʼಇನ್ನತೆ ಚಿಂತ ವಿಷಯಂʼ – ಸಿನಿಮಾಗಳು)

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

17 minutes ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

23 minutes ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago