Featured

ಮಲಯಾಳಂ ಸಿನಿಮಾ ರಂಗದ ಜನಪ್ರಿಯ ಹಾಸ್ಯನಟ ಮಾಮುಕೋಯ ನಿಧನ – Vishwanews24

ಮಲಯಾಳಂ ಸಿನಿಮಾ ರಂಗದ ಜನಪ್ರಿಯ ಹಾಸ್ಯನಟ ಮಾಮುಕೋಯ ನಿಧನ

ಮಲಯಾಳಂ ಸಿನಿಮಾ ರಂಗದ ಜನಪ್ರಿಯ ಹಾಸ್ಯನಟ ಮಾಮುಕೋಯ ನಿಧನ
ಕೋಝಿಕ್ಕೋಡ್: ಮಲಯಾಳಂ ಸಿನಿಮಾ ರಂಗದ ದಿಗ್ಗಜ ನಟ ಮಾಮುಕೋಯ (76) ಬುಧವಾರ ಮಧ್ಯಾಹ್ನ ( ಎ.26 ರಂದು) ನಿಧನರಾಗಿದ್ದಾರೆ.

ಇತ್ತೀಚೆಗೆ ಮಲಪ್ಪುರಂಗೆ ಫುಟ್‌ ಬಾಲ್ ಪಂದ್ಯಾಕೂಟವೊಂದನ್ನು ಉದ್ಘಾಟನೆ ಮಾಡಲು ಬಂದಿದ್ದ ವೇಳೆ ಅವರು ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರ ಆರೋಗ್ಯ ಮೊದಲಿಗೆ ಸ್ಥಿರವಾಗಿತ್ತು. ಆದರೆ ಆ ಬಳಿಕ ಆರೋಗ್ಯ ಮತ್ತಷ್ಟು ಹದಗೆಟ್ಟು, ಬೇರೊಂದು ಆಸ್ಪತ್ರಗೆ ದಾಖಲು ಮಾಡಲಾಗಿತ್ತು, ಅಲ್ಲಿ ವೆಂಟಿಲೇಟರ್‌ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಬುಧವಾರ ಮಧ್ಯಾಹ್ನ 1:05 ರ ಸುಮಾರಿಗೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.

1946 ರಲ್ಲಿ ಹುಟ್ಟಿದ ಅವರು, ಮೊದಲಿಗೆ ರಂಗಭೂಮಿ ಕಲಾವಿದರಾಗಿ ನಟನೆ ಆರಂಭಿಸಿದ್ದರು. ಆ ಬಳಿಕ 1979 ರಲ್ಲಿ ನಿಲಂಬೂರ್ ಬಾಲನ್ ನಿರ್ದೇಶನದ ‘ಅನ್ಯಾರುಡೆ ಭೂಮಿ’ ಚಿತ್ರದ ಮೂಲಕ ಮಾಲಿವುಡ್‌ಗೆ ಪಾದಾರ್ಪಣೆ ಮಾಡಿದರು.

ʼದೂರೆ ದೂರೆ ಓರು ಕೂಡು ಕೂಟಂ’, ‘ಗಾಂಧಿನಗರ್ ಸೆಕೆಂಡ್‌ ಸ್ಟ್ರೀಟ್‌, ‘ನಾಡೋಡಿಕ್ಕಟ್ಟು’, ‘ಪಟ್ಟಣಪ್ರವೇಶಂʼ,‘ಉನ್ನಿಕಲೆ ಒರು ಕಧ ಪಾರಾಯಂʼ ‘ವಡಕ್ಕುನೋಕ್ಕಿಯಂʼ, ʼಉಸ್ತಾದ್‌ ಹೊಟೇಲ್‌ʼ, ‘ಇಂಡಿಯನ್‌ ರೂಪೀಸ್,’ ‘ಮಿನ್ನಲ್ ಮುರಳಿʼ, ‘ಕುರುತಿʼ, ‘ತೀರ್ಪ್ಪು ಹೀಗೆ ಸುಮಾರು 450 ಚಿತ್ರಗಳಲ್ಲಿ ಅವರು ನಟಿಸಿದ್ದಾರೆ.

ಹಾಸ್ಯಪಾತ್ರಗಳಿಂದಲೇ ಗಮನ ಸೆಳೆದ ಅವರು ಎರಡು ಬಾರಿ ತಮ್ಮ ನಟನೆಗೆ ಕೇರಳ ಸ್ಟೇಟ್‌ ಅವಾರ್ಡ್ ನ್ನು ಪಡೆದುಕೊಂಡಿದ್ದಾರೆ. ( ʼಪೆರುಮಝಕ್ಕಲಂʼ ಮತ್ತು ʼಇನ್ನತೆ ಚಿಂತ ವಿಷಯಂʼ – ಸಿನಿಮಾಗಳು)

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

5 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

6 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

6 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

9 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

9 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

10 hours ago