Featured

ಮಲಾವಿ ದೇಶದ ಉಪಾಧ್ಯಕ್ಷ ಚಿಲಿಮಾ ಪ್ರಯಾಣಿಸುತ್ತಿದ್ದ ವಿಮಾನ ನಾಪತ್ತೆ – vishwanews24

ಮಲಾವಿ ದೇಶದ ಉಪಾಧ್ಯಕ್ಷ ಚಿಲಿಮಾ ಪ್ರಯಾಣಿಸುತ್ತಿದ್ದ ವಿಮಾನ ನಿಗೂಢ ನಾಪತ್ತೆ, ತೀವ್ರ ಶೋಧ

ಲಿಲಾಂಗ್ವೆ(ಮಲಾವಿ): ಮಲಾವಿ ದೇಶದ ಉಪಾಧ್ಯಕ್ಷ ಸೌಲೋಸ್‌ ಚಿಲಿಮಾ ಹಾಗೂ ಇತರ ಒಂಬತ್ತು ಜನರನ್ನು ಕರೆದೊಯ್ಯುತ್ತಿದ್ದ ವಿಮಾನ ನಿಗದಿತ ಸಮಯವಾದ ಸೋಮವಾರ ಲ್ಯಾಂಡಿಂಗ್‌ ಆಗದೆ ನಾಪತ್ತೆಯಾಗಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಮಲಾವಿ ರಾಜಧಾನಿ ಲಿಲಾಂಗ್ವೆನಿಂದ ರಕ್ಷಣಾ ಪಡೆಯ ವಿಮಾನದಲ್ಲಿ ಉಪಾಧ್ಯಕ್ಷ ಚಿಲಿಮಾ ಹಾಗೂ ಇತರ ಒಂಬತ್ತು ಮಂದಿ ಪ್ರಯಾಣಿಕರು ಪ್ರಯಾಣಿಸಿದ್ದರು ಎಂದು ಸಿಎನ್‌ ಎನ್‌ ವರದಿ ಮಾಡಿದೆ.

 

ಅಧಿಕಾರಿಗಳ ಮಾಹಿತಿ ಪ್ರಕಾರ, ಉತ್ತರ ಲಿಲಾಂಗ್ವೆನಿಂದ ಸುಮಾರು 380 ಕಿಲೋ ಮೀಟರ್‌ ದೂರದಲ್ಲಿರುವ ಮುಝುಜು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿಲಿಮಾ ಪ್ರಯಾಣಿಸುತ್ತಿದ್ದ ವಿಮಾನ ಲ್ಯಾಂಡ್‌ ಆಗಬೇಕಿತ್ತು ಎಂದು ತಿಳಿಸಿದ್ದಾರೆ.

ವಿಮಾನ ರಾಡಾರ್‌ ಸಂಪರ್ಕಕ್ಕೆ ಸಿಗದೇ ಇದ್ದು, ನಾಪತ್ತೆಯಾಗಿರುವ ವಿಮಾನ ಪತ್ತೆಗಾಗಿ ಎಲ್ಲಾ ರೀತಿಯ ಶ್ರಮ ವಹಿಸಲಾಗುತ್ತಿದೆ ಎಂದು ಅಧ್ಯಕ್ಷರ ಕಚೇರಿಯ ಪ್ರಕಟನೆ ವಿವರಿಸಿದೆ. ಮಲಾವಿ ಉಪಾಧ್ಯಕ್ಷ ಚಿಲಿಮಾ ಹಾಗೂ ಇತರ ಪ್ರಯಾಣಿಕರ ಶೋಧಕ್ಕಾಗಿ ದೇಶೀಯ ಹಾಗೂ ಅಂತಾರಾಷ್ಟ್ರೀಯ ಏಜೆನ್ಸಿಯನ್ನು ಸಂಪರ್ಕಿಸುವಂತೆ ಸೂಚನೆ ನೀಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

4 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

4 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

4 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

7 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

8 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

8 hours ago