Featured

ಮಲಾವಿ ದೇಶದ ಉಪಾಧ್ಯಕ್ಷ ಚಿಲಿಮಾ ಪ್ರಯಾಣಿಸುತ್ತಿದ್ದ ವಿಮಾನ ನಾಪತ್ತೆ – vishwanews24

ಮಲಾವಿ ದೇಶದ ಉಪಾಧ್ಯಕ್ಷ ಚಿಲಿಮಾ ಪ್ರಯಾಣಿಸುತ್ತಿದ್ದ ವಿಮಾನ ನಿಗೂಢ ನಾಪತ್ತೆ, ತೀವ್ರ ಶೋಧ

ಲಿಲಾಂಗ್ವೆ(ಮಲಾವಿ): ಮಲಾವಿ ದೇಶದ ಉಪಾಧ್ಯಕ್ಷ ಸೌಲೋಸ್‌ ಚಿಲಿಮಾ ಹಾಗೂ ಇತರ ಒಂಬತ್ತು ಜನರನ್ನು ಕರೆದೊಯ್ಯುತ್ತಿದ್ದ ವಿಮಾನ ನಿಗದಿತ ಸಮಯವಾದ ಸೋಮವಾರ ಲ್ಯಾಂಡಿಂಗ್‌ ಆಗದೆ ನಾಪತ್ತೆಯಾಗಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಮಲಾವಿ ರಾಜಧಾನಿ ಲಿಲಾಂಗ್ವೆನಿಂದ ರಕ್ಷಣಾ ಪಡೆಯ ವಿಮಾನದಲ್ಲಿ ಉಪಾಧ್ಯಕ್ಷ ಚಿಲಿಮಾ ಹಾಗೂ ಇತರ ಒಂಬತ್ತು ಮಂದಿ ಪ್ರಯಾಣಿಕರು ಪ್ರಯಾಣಿಸಿದ್ದರು ಎಂದು ಸಿಎನ್‌ ಎನ್‌ ವರದಿ ಮಾಡಿದೆ.

 

ಅಧಿಕಾರಿಗಳ ಮಾಹಿತಿ ಪ್ರಕಾರ, ಉತ್ತರ ಲಿಲಾಂಗ್ವೆನಿಂದ ಸುಮಾರು 380 ಕಿಲೋ ಮೀಟರ್‌ ದೂರದಲ್ಲಿರುವ ಮುಝುಜು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿಲಿಮಾ ಪ್ರಯಾಣಿಸುತ್ತಿದ್ದ ವಿಮಾನ ಲ್ಯಾಂಡ್‌ ಆಗಬೇಕಿತ್ತು ಎಂದು ತಿಳಿಸಿದ್ದಾರೆ.

ವಿಮಾನ ರಾಡಾರ್‌ ಸಂಪರ್ಕಕ್ಕೆ ಸಿಗದೇ ಇದ್ದು, ನಾಪತ್ತೆಯಾಗಿರುವ ವಿಮಾನ ಪತ್ತೆಗಾಗಿ ಎಲ್ಲಾ ರೀತಿಯ ಶ್ರಮ ವಹಿಸಲಾಗುತ್ತಿದೆ ಎಂದು ಅಧ್ಯಕ್ಷರ ಕಚೇರಿಯ ಪ್ರಕಟನೆ ವಿವರಿಸಿದೆ. ಮಲಾವಿ ಉಪಾಧ್ಯಕ್ಷ ಚಿಲಿಮಾ ಹಾಗೂ ಇತರ ಪ್ರಯಾಣಿಕರ ಶೋಧಕ್ಕಾಗಿ ದೇಶೀಯ ಹಾಗೂ ಅಂತಾರಾಷ್ಟ್ರೀಯ ಏಜೆನ್ಸಿಯನ್ನು ಸಂಪರ್ಕಿಸುವಂತೆ ಸೂಚನೆ ನೀಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

8 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

8 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

9 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

9 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

9 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

9 hours ago