ಉಡುಪಿ: ಮಲ್ಪೆಯಲ್ಲಿ ಮಾ. 18 ರಂದು ದಲಿತ ಮಹಿಳೆಗೆ ಹಲ್ಲೆ ನಡೆಸಿದ ಕುರಿತು ಸರಿಯಾಗಿ ಮಾಹಿತಿ ಸಂಗ್ರಹಿಸದ ಮಲ್ಪೆ ಠಾಣೆಯ ಇಬ್ಬರು ಬೀಟ್ ಕಾನ್ ಸ್ಟೇಬಲ್ ಗಳನ್ನು ಅಮಾನತುಗೊಳಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ತಿಳಿಸಿದ್ದಾರೆ.
ಅಮಾನತುಗೊಂಡವರು ಹೆಡ್ ಕಾನ್ಸ್ಟೇಬಲ್ ಸುರೇಶ್ ಮತ್ತು ಪೊಲೀಸ್ ಕಾನ್ಸ್ಟೇಬಲ್ ನಾಗರಾಜ್ ಮಲ್ಪೆಯಲ್ಲಿ ಮೀನು ಕದ್ದಿದ್ದಾರೆ ಎಂಬ ಆರೋಪದ ಮೇಲೆ ವಿಜಯನಗರದ ಮಹಿಳೆಯೋರ್ವರ ಮೇಲೆ ಗುಂಪೊಂದು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಪ್ರಕರಣದ ತನಿಖೆಯನ್ನು ಮುಂದುವರಿಸಲಾಗಿದ್ದು, ಗುರುವಾರ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿದ ಸಂಬಂಧ ಇಬ್ಬರು ಆರೋಪಿಗಳಾದ ಲೀಲಾ ಮತ್ತು ಪಾರ್ವತಿ ಎಂಬುವರನ್ನು ಬಂಧಿಸಲಾಗಿರುತ್ತದೆ ಮತ್ತು ತನಿಖೆ ಮುಂದುವರೆದಿರುತ್ತದೆ.
ಈ ಪ್ರಕರಣದಲ್ಲಿ ಒಂದು ಮಹಿಳೆ ಮೇಲೆ ನಡೆದಿರುವ ಅಮಾನುಷ ಕೃತ್ಯವನ್ನು ರಾಜ್ಯ ಮಹಿಳಾ ಆಯೋಗವು ತೀವ್ರವಾಗಿ ಖಂಡಿಸಿರುತ್ತದೆ. ಸದರಿ ಪ್ರಕರಣಕ್ಕೆ ಕಾರಣಕರ್ತರಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು, ಕೈಗೊಂಡ ಕ್ರಮದ ಸಮಗ್ರ ವರದಿಯನ್ನು ಅತೀ ಶೀಘ್ರದಲ್ಲಿ ಆಯೋಗಕ್ಕೆ ಸಲ್ಲಿಸುವಂತೆ ತಿಳಿಸಿರುತ್ತಾರೆ ಎಂದು ಅವರು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಬುಧವಾರ ಮೀನು ಮಾರಾಟ ಮಾಡುವ ಶ್ರೀಮತಿ ಲಕ್ಷ್ಮೀ, ಶಿಲ್ಪ, ಆರಾಧನ ಬೋಟಿನ ಸುಂದರ್ ಎಂಬವರನ್ನು ಬಂಧಿಸಲಾಗಿತ್ತು. ಸದ್ಯ ಘಟನೆಗೆ ಸಂಬಂಧಿಸಿದಂತೆ ಬಂಧಿತರಾದವರ ಸಂಖ್ಯೆ ಐದಕ್ಕೆ ಏರಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…