ಮಲ್ಪೆ: ಕಳವು ಮಾಡಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮರಳನ್ನು ವಾಹನ ಸಮೇತ ಮಲ್ಪೆ ಪೊಲೀಸರು ಹಿಡಿದು ಮರಳು ಹಾಗೂ ವಾಹನ ಚಾಲಕನನ್ನು ವಶಪಡಿಸಿಕೊಂಡಿರುವ ಘಟನೆ ಅ. 2ರಂದು ನಡೆದಿದೆ.
ಕಿನ್ನಿಮೂಲ್ಕಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಮಂಗಳೂರು ಕಡೆಯಿಂದ ಸಂತೆಕಟ್ಟೆ ಕಡೆಗೆ ಅನುಮಾನಸ್ಪದವಾಗಿ ಟಿಪ್ಪರ್ ಅನ್ನು ಚಲಾಯಿಸಿಕೊಂಡು ಬರುವುದನ್ನು ಗಮನಿಸಿದ ಪೊಲೀಸರು ಕಿನ್ನಿಮೂಲ್ಕಿ ಸ್ವಾಗತ ಗೋಪುರದ ಬಳಿ ವಾಹನವನ್ನು ತಡೆದು ನಿಲ್ಲಿಸಿದ್ದರು.
ವಾಹನವನ್ನು ಪರಿಶೀಲಿಸಿದಾಗ ಯಾವುದೇ ಪರವಾನಿಗೆ ಇಲ್ಲದೆ ಮರಳನ್ನು ಅಕ್ರಮ ಸಾಗಾಟ ಮಾಡುತ್ತಿರುವ ಪತ್ತೆಯಾಗಿದೆ. ವಾಹನ ಚಾಲಕ ಪ್ರಭು ಡಿ. ಸನಗಿನ್ನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದಾಗ ಮರಳನ್ನು ಮೂಲ್ಕಿಯ ಸಂಕಲಕರೆ ಪಟ್ಟೆಕ್ರಾಸ್ ಎಂಬಲ್ಲಿರುವ ಸಿನೋಜ್ ಅವರು ದಕ್ಕೆಯಿಂದ ತಂದಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…