ಮಲ್ಪೆ: ಅಪಾರ್ಟ್ಮೆಂಟ್ ನ ಮಹಡಿಯಲ್ಲಿ ಜೇನು ತೆಗೆಯುವುದನ್ನು ನೋಡುತ್ತಿದ್ದ 13 ವರ್ಷದ ಬಾಲಕ ಮಹಡಿಯಿಂದ ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದ ಘಟನೆ ನ್ನರ್ಪಾಡಿ ಜಯದುರ್ಗಾ ದೇವಸ್ಥಾನದ ಸಮೀಪ ಸೆ.೨೨ರ ಗುರುವಾರ ನಡೆದಿದೆ.
ಮೃತ ಬಾಲಕನನ್ನು ಆಂದ್ರಪ್ರದೇಶ ಮೂಲದ ಮುಕೇಶ ಕುಮಾರ ಹಾಗೂ ರೀನಾ ಮಂಡೆಲ್ ದಂಪರಿಗಳ ಪುತ್ರ ಆಶಿಕ್ (13 ವರ್ಷ) ಎಂದು ಗುರುತಿಸಲಾಗಿದೆ.
ಆಂದ್ರಪ್ರದೇಶ ಮೂಲದ ಕುಟುಂಬವೊಂದು ಮೂರು ದಿನದ ಹಿಂದೆ ಉಡುಪಿಗೆ ಬಂದು ಉದ್ಯಾವರ ಚರ್ಚ್ ಬಳಿ ವಾಸ ಮಾಡಿಕೊಂಡಿದ್ದು , ಊರೂರು ತಿರುಗಿ ಜೇನು ತೆಗೆಯುವಯುವ ಕೆಲಸ ಮಾಡಿಕೊಂಡಿದ್ದರು.
ಇದನ್ನೂ ಓದಿ : ಅನವಶ್ಯಕ ಚರ್ಚೆ ಬೇಡ, ಸಹನೆಯನ್ನು ಕಾಪಾಡಿ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಈ ಕುಟುಂಬ ಗುರುವಾರದಂದು ಬೆಳಿಗ್ಗೆ ಜಯದುರ್ಗಾ ದೇವಸ್ಥಾನದ ಎದುರು ಇರುವ ಖಾಸಗಿ ಅಪಾರ್ಟ್ಮೆಂಟ್ ನಲ್ಲಿ ಮೇಲುಗಡೆ ಜೇನಿರುವುದನ್ನು ನೋಡಿ ಪ್ಲಾಟಿನ ವಾರೀಸುದಾರರಾದ ಜಗದೀಶ ಕಾಮತ್ ರವರಲ್ಲಿ ಜೇನು ತೆಗೆಯುವ ಬಗ್ಗೆ ವಿಚಾರಿಸಿದ್ದಾರೆ. ಜಗದೀಶ್ ಕಾಮತ್ ರವರು ಜೇನು ತೆಗೆಯಲು ಒಪ್ಪಿಗೆ ನೀಡಿದ್ದು, ಹೀಗಾಗಿ ಅಂದೇ ಬೆಳಿಗ್ಗೆ 09:30 ತ ವೇಳೆ ಅಪಾರ್ಟ್ಮೆಂಟ್ ಮೇಲೆ ಹೋಗಿ ಜೇನು ತೆಗೆಯುತ್ತಿದ್ದಾಗ, ಮಹಡಿಯಲ್ಲಿ ನಿಂತು ಅದನ್ನು ಗಮನಿಸುತ್ತಿದ್ದ ಬಾಲಕ ಆಶಿಕ್ ಆಯಾತಪ್ಪಿ ಕೆಳಗೆ ಬಿದ್ದಿದ್ದಾನೆ. ಇದರಿಂದ ತಲೆಗೆ ,ಎದೆಗೆ , ದೇಹದ ಇತರ ಭಾಗಗಳಿಗೆ ತೀವ್ರ ತರದ ಗಾಯವಾಗಿದ್ದು ಚಿಕಿತ್ಸೆಯ ಬಗ್ಗೆ ಉಡುಪಿ ಅಜ್ಜರಕಾಡು ಸರಕಾರಿ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದ್ದಾರೆ ಎಂದು ಬಾಲಕನ ತಾಯಿ ನೀಡಿದ ದೂರಿನಂತೆ ಪ್ರಕರಣ ಪ್ರಕರಣದಲ್ಲಿ ದಾಖಲಾಗಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…