ಮಲ್ಪೆ: ಆಜಾನ್ ಶಬ್ದ ನಿಯಂತ್ರಣಕ್ಕಾಗಿ ಮೈಕ್ಗಳಿಗೆ ಅಳವಡಿಸಲು ಡಿವೈಸ್ ಅಭಿವೃದ್ಧಿಪಡಿಸಲಾಗಿದ್ದು, ಹೀಗಾಗಿ ಶಬ್ದವನ್ನು ನಿಯಂತ್ರಣದಲ್ಲಿ ಇಡಹುದಾಗಿದೆ ಎಂದು ಬೆಂಗಳೂರು ಸಿಟಿ ಜಾಮಿಯಾ ಮಸೀದಿಯ ಖತೀಬ್ ಮೌಲಾನ ಡಾ| ಮೊಹಮ್ಮದ್ ಮಕ್ಸೂದ್ ಇಮ್ರಾನ್ ಸಹಾಬ್ ರಶಾದಿ ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶದಂತೆ ಶಬ್ದ ನಿಯಂತ್ರಣಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಯಾರಿಗೂ ತೊಂದರೆ ನೀಡುವುದು ಸರಿಯಲ್ಲ ಬೇಕೆಂದರೆ ದೇವಸ್ಥಾನ, ಚರ್ಚ್, ಗುರುದ್ವಾರಗಳಲ್ಲೂ ಅಳವಡಿಸಿಕೊಳ್ಳಬಹುದಾಗಿದೆ. ಈ ಡಿವೈಸ್ ಆದಷ್ಟು ಬೇಗ ರಾಜ್ಯದ ಎಲ್ಲ ಮಸೀದಿಗಳಲ್ಲೂ ಅಳವಡಿಕೆ ಮಾಡಲಾಗುವುದು ಹಾಗೂ ಪ್ರತಿಯೊಂದು ಜಿಲ್ಲೆಗೂ ತೆರಳಿ ಈ ಬಗ್ಗೆ ಅರಿವು ಮೂಡಿಸಿ ಅಳವಡಿಸಿಕೊಳ್ಳುವಂತೆ ಮನವಿ ಮಾಡಲಾಗುವುದು ಎಂದು ಹೇಳಿದ್ದಾರೆ.
ಆಜಾನ್ಗೆ ಸಂಬಂಧಿಸಿ ಶ್ರೀರಾಮ ಸೇನೆಯವರು ಮಸೀದಿಯ ಮುಂದೆ ಹನುಮಾನ್ ಚಾಲೀಸಾ ಪಠಿಸಿದರೆ ಯಾರೂ ವಿರೋಧ ಮಾಡಬಾರದು. ಅವರಿಗೆ ನೀರು ಬೇಕಾದರೆ ನೀರು, ಜ್ಯೂಸ್ ಬೇಕಾದರೆ ಜ್ಯೂಸ್ ಕೊಡಿ. ಆ ಮೂಲಕ ನಾವು ಸೌಹಾರ್ದದ ಸಂದೇಶವನ್ನು ನೀಡಬೇಕು ಎಂದರು. ಈ ಸಂದರ್ಭ ಉಡುಪಿ ಜಿಲ್ಲಾ ವಕ್ಫ್ ಮಂಡಳಿ ಸಲಹಾ ಸಮಿತಿಯ ಮಾಜಿ ಅಧ್ಯಕ್ಷ ಯಾಹ್ಯ ನಕ್ವಾ ಹಾಜರಿದ್ದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…