ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ ಗಾಳಿ ಬೀಸುತ್ತಿರುವುದರಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಆಳಸಮುದ್ರ ಬೋಟು ಹೊರತುಪಡಿಸಿ ಪರ್ಸೀನ್, ಸಣ್ಣ ಟ್ರಾಲ್ ಬೋಟುಗಳು ಮೀನುಗಾರಿಕೆಗೆ ತೆರಳಲಾಗದೆ ಬಂದರಿನಲ್ಲಿ ಲಂಗರು ಹಾಕಿವೆ. ಬಹುತೇಕ ಆಳಸಮುದ್ರ ಬೋಟುಗಳು ಮೀನುಗಾರಿಕೆ ನಡೆಸುತ್ತಿದ್ದು, ಮೀನುಗಾರಿಕೆ ನಡೆಸಲು ಸಾಧ್ಯವಾಗದ ಬೋಟುಗಳು ಸಮುದ್ರ ಮಧ್ಯೆ ಲಂಗರು ಹಾಕಿ ನಿಂತಿವೆ. ಮಂಗಳೂರು, ಮಲ್ಪೆ, ಗಂಗೊಳ್ಳಿ, ಭಟ್ಕಳ, ಕಾರವಾರ ಬಂದರುಗಳಲ್ಲಿ ಪರ್ಸೀನ್ ಬೋಟು ತೆರಳಲಿಲ್ಲ ಎನ್ನಲಾಗಿದೆ.
ಸಮುದ್ರದಲ್ಲಿ ಅಂತಹ ದೊಡ್ಡ ಮಟ್ಟದ ತೂಫಾನ್ ಆಗಿಲ್ಲ. ಅಮಾವಾಸ್ಯೆ ಬಳಿಕ ಹುಣ್ಣಿಮೆಯ ಎದುರಿಗೆ ಸಮುದ್ರದಲ್ಲಿ ವ್ಯತ್ಯಾಸ ಕಂಡು ಬರುವುದು ಸಹಜ, ಈ ರೀತಿ ಇರುವುದರಿಂದ ಪರ್ಸೀನ್ ಬೋಟುಗಳಿಂದ ಮೀನಿಗೆ ಬಲೆ ಹಾಕಲು ಸಾಧ್ಯವಾಗುತ್ತಿಲ್ಲ. ಈಗಾಗಲೇ ಪಸೀìನ್ ಬೋಟ್ಗಳು ಮೀನಿಗೆ ಹಾಕಿದ ಬಲೆ ಹರಿದಿದೆ. ಹಾಗಾಗಿ ಎಲ್ಲ ಬೋಟುಗಳು ಹಿಂದಿರುಗಿದ್ದು, ಒಂದೆರಡು ದಿನದಲ್ಲಿ ಸಮುದ್ರ ಸಹಜ ಸ್ಥಿತಿಗೆ ಬರಲಿದೆ ಎಂದು ಮಲ್ಪೆ ಪಸೀìನ್ ಮೀನುಗಾರರ ಸಂಘದ ಅಧ್ಯಕ್ಷ ನಾಗರಾಜ್ ಸುವರ್ಣ ತಿಳಿಸಿದ್ದಾರೆ.
ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…