ಮಲ್ಪೆ: ಮೂರ್ನಾಲ್ಕು ದಿನಗಳಿಂದ ಆಳಸಮುದ್ರದಲ್ಲಿ ಬಲವಾದ ಗಾಳಿ ಬೀಸುತ್ತಿದ್ದು, ಮೀನುಗಾರಿಕೆಗೆ ಅಡ್ಡಿಯಾಗಿದೆ.
ಭಾರೀ ಗಾಳಿ ಬೀಸುತ್ತಿರುವುದರಿಂದ ಕೆಲವು ಮೀನುಗಾರರು ಕಡಲಿಗಿಳಿಲು ಹಿಂದೇಟು ಹಾಕುತ್ತಿದ್ದಾರೆ. ಕರ್ನಾಟಕ, ಮಹಾರಾಷ್ಟ್ರ, ಗೋವಾ ಆಳಸಮುದ್ರ ದಲ್ಲಿ ಉತ್ತರದಿಂದ ಬಲವಾದ ಗಾಳಿ ಬೀಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಎರಡು- ಮೂರು ದಿನಗಳಿಂದ ಮಲ್ಪೆ ಬಂದರಿನಲ್ಲಿ ಬಹುತೇಕ ಎಲ್ಲ ಪರ್ಸಿನ್ ಬೋಟುಗಳು ಲಂಗರು ಹಾಕಿವೆ. ಟ್ರಾಲ್ಬೋಟ್ (370), ಸಣ್ಣ ಟ್ರಾಲ್ ಬೋಟುಗಳು ದಡದತ್ತ ಧಾವಿಸಿದ್ದು, ಮತ್ತೆ ಮೀನುಗಾರಿಕೆಗೆ ತೆರಳಿಲ್ಲ.
ಮೀನುಗಾರ ಕೃಷ್ಣ ಎಸ್. ಸುವರ್ಣ ಹೇಳುವಂತೆ, ಈ ಸಮಯದಲ್ಲಿ ಸಮುದ್ರದಲ್ಲಿ ಗಾಳಿ ತಾಸಿಗೆ ಹೆಚ್ಚೆಂದರೆ 15ರಿಂದ 20 ಕಿ.ಮೀ. ವೇಗದಲ್ಲಿ ಬೀಸುತ್ತಿದ್ದರೆ ಮೀನುಗಾರಿಕೆಗೆ ತೆರಳಬಹುದು. ಆದರೆ ಈಗ ತಾಸಿಗೆ 35-40 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿದ್ದು, ಮೀನುಗಾರಿಕೆ ನಡೆಸುವುದು ಅಪಾಯಕಾರಿ. ಅಲೆಗಳ ಅಬ್ಬರವೂ ಇರುವುದರಿಂದ ಬಲೆ ಹಾಕಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಹೆಚ್ಚಿನ ಬೋಟುಗಳು ಮೀನುಗಾರಿಕೆ ನಡೆಸಲಾಗದೆ ಸಮುದ್ರ ಮಧ್ಯೆ ಲಂಗರು ಹಾಕಿವೆ. ಇನ್ನು ಕೆಲವು ಆಳಸಮುದ್ರ ಬೋಟುಗಳು ಸಮೀಪದ ಬಂದರು ಪ್ರವೇಶಿಸಿವೆ .ಅಪಾಯವನ್ನು ಅರಿತು ಗಾಳಿ ಕಡಿಮೆಯಾಗುವವರೆಗೆ ಪರ್ಸಿನ್ ಮೀನುಗಾರಿಕೆಯನ್ನು ಸ್ಥಗಿತಗೊಳಿಸಿದ್ದೇವೆ ಎಂದು ಪರ್ಸಿನ್ ಮೀನುಗಾರರ ಸಂಘದ ಅಧ್ಯಕ್ಷ ನಾಗರಾಜ್ ಸುವರ್ಣ ತಿಳಿಸಿದ್ದಾರೆ.
ಮೀನು ಧಾರಣೆ ಹೆಚ್ಚಳ
ಪ್ರಸ್ತುತ ಮೀನಿಗೆ ಬೇಡಿಕೆ ಇದ್ದರೂ ಬೇಕಾದಷ್ಟು ಪ್ರಮಾಣದಲ್ಲಿ ಮೀನು ಸಿಗುತ್ತಿಲ್ಲ. ಗಾಳಿ ಅಡ್ಡಿಯಾಗುವುದರಿಂದ ಮೀನುಗಾರಿಕೆಗೆ ತೆರಳಿದರೂ ಮೀನು ಸಿಗದೆ ಬರಿಗೈಯಲ್ಲಿ ವಾಪಸಾಗುವ ಪರಿಸ್ಥಿತಿ ಇದೆ ಎಂದು ಮೀನುಗಾರ ಕಾರ್ಮಿಕರು ಹೇಳಿದ್ದಾರೆ. ಇದರಿಂದಾಗಿ ಮಾರುಕಟ್ಟೆಯಲ್ಲಿ ಮೀನು ಲಭ್ಯತೆ ಕಡಿಮೆಯಾಗಿದ್ದು, ದರ ಏರಿದೆ.
ಮೂರು ದಿನಗಳಿಂದ ಸಮುದ್ರ ಮಧ್ಯೆ ಒಂದೇ ಸವನೆ ಬಲವಾದ ಗಾಳಿ ಬೀಸುತ್ತಿದ್ದು, ಮೀನುಗಾರಿಕೆ ನಡೆಸಲಾಗದೆ ಮಲ್ಪೆಯ ಬಹುತೇಕ ಬೋಟುಗಳು ವಾಪಸಾಗಿವೆ. ಆಳಸಮುದ್ರ ಬೋಟುಗಳಲ್ಲಿ ಕೆಲವು ಸಮುದ್ರ ಮಧ್ಯೆ ಲಂಗರು ಹಾಕಿದ್ದರೆ, ಇನ್ನು ಕೆಲವು ಸಮೀಪದ ಬಂದರು ಪ್ರವೇಶಿಸಿವೆ.
-ರತ್ನಾಕರ ಸಾಲ್ಯಾನ್, ಪ್ರ. ಕಾರ್ಯದರ್ಶಿ, ಮಲ್ಪೆ ಮೀನುಗಾರರ ಸಂಘ
ಗಾಳಿಯಿಂದಾಗಿ ಅಲೆಗಳಲ್ಲಿ ಭಾರೀ ವ್ಯತ್ಯಾಸ ಕಂಡುಬಂದಿದ್ದು ಮೀನುಗಾರ ರಿಗೆ ಬಲೆ ಹಾಕಲು ಸಾಧ್ಯವಾಗುತ್ತಿಲ್ಲ. ಶೇ. 40ರಷ್ಟು ಬೋಟುಗಳು ಮಲ್ಪೆ ಬಂದರಿಗೆ ವಾಪಸಾಗಿವೆ. ಒಂದೆರಡು ದಿನಗಳಲ್ಲಿ ಗಾಳಿ ಕಡಿಮೆಯಾಗುವ ಲಕ್ಷಣವಿದೆ.
-ಶಿವಕುಮಾರ್, ಉಪನಿರ್ದೇಶಕರು, ಮೀನುಗಾರಿಕೆ ಇಲಾಖೆ
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…