ಮಲ್ಪೆ : ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ದಲಿತ ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ಅಂಬಲಪಾಡಿಯ ಖಾಸಗಿ ಹೋಟೇಲ್ ನಲ್ಲಿ ರವಿವಾರ ನಡೆದಿದೆ.
ಕರವೇ ಸದಸ್ಯರಾದ ಪ್ರಭಾಕರ, ಕುಶಾಲ್, ಜಯ, ಅಶ್ವಿನಿ ಎಂಬವರು ದಲಿತ ಯುವಕನ ಮೇಲೆ ಹಲ್ಲೆ ನಡೆಸಿದ್ದು ಹಲ್ಲೆಗೊಳಗಾದ ಯುವಕನನ್ನು ಮೂಡುಬೆಳ್ಳೆ ನಿವಾಸಿ ಶಶಿಕುಮಾರ್ (34) ಎಂದು ಗುರುತಿಸಲಾಗಿದೆ.
ದಿನಾಂಕ. 04.02.2024 ರ ರವಿವಾರ ಸಂಜೆ 4 ಗಂಟೆಗೆ ಖಾಸಗಿ ಹೋಟೇಲ್ ನಲ್ಲಿ ಕರವೇ ಸಭೆಯನ್ನು ಕರವೇ ಸದಸ್ಯ ಪ್ರಭಾಕರ ಪೂಜಾರಿ ಕರೆದಿದ್ದು ಈ ನಡುವೆ ನಿಕಟ ಪೂರ್ವ ಅಧ್ಯಕ್ಷ ಅನ್ಸಾರ್ ಅಹಮದ್ ಪ್ರಭಾಕರ ರವರಲ್ಲಿ ಪ್ರಸ್ತುತ ಅಧ್ಯಕ್ಷರೇ ಇಲ್ಲದೇ, ಎಲ್ಲರನ್ನು ವಿಶ್ವಾಸಕ್ಕೆ ತೆಗೆದು ಕೊಳ್ಳದೇ ಹೇಗೆ ಮೀಟಿಂಗ್ ಎಂದು ಕೇಳಿದಾಗ ಅವರೊಳಗೆ ವಾದ-ವಿವಾದ ನಡೆದಿರುತ್ತದೆ.
ಈ ಸಂದರ್ಭದಲ್ಲಿ ಆರೋಪಿಗಳಾದ ಪ್ರಭಾಕರ, ಕುಶಾಲ್, ಜಯ, ಅಶ್ವಿನಿ ಎಂಬವರು ದಲಿತ ಯುವಕನಾದ ಶಶಿಕುಮಾರ್ ಗೆ ಅವಾಚ್ಯ ಶಬ್ದಗಳಿಂದ ಬೈದಿರುವುದು ಮಾತ್ರವಲ್ಲದೇ ಹಲ್ಲೆ ನಡೆಸಿರುತ್ತಾರೆ.
ಈ ಕುರಿತು ಮಲ್ಪೆ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 18/2024 ಕಲಂ: 323, 504 , 506 ಜೊತೆಗೆ 34 ಐಪಿಸಿ & 3(1)(r), 3(1)(s), 3(2)(v-a) SC/ST ACT ರಂತೆ ಪ್ರಕರಣ ದಾಖಲಾಗಿರುತ್ತದೆ.
ಕರವೇ ಪ್ರಭಾಕರ ಪೂಜಾರಿ ವಿರುದ್ಧ ಕಳೆದ 1 ತಿಂಗಳ ಹಿಂದೆ ದಲಿತ ಮಹಿಳೆಗೆ ಜೀವಬೆದರಿಕೆಯೊಡ್ದಿದ ಆರೋಪದ ಮೇಲೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದಲಿತ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…