ಮಲ್ಪೆ : ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ದಲಿತ ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ಅಂಬಲಪಾಡಿಯ ಖಾಸಗಿ ಹೋಟೇಲ್ ನಲ್ಲಿ ರವಿವಾರ ನಡೆದಿದೆ.
ಕರವೇ ಸದಸ್ಯರಾದ ಪ್ರಭಾಕರ, ಕುಶಾಲ್, ಜಯ, ಅಶ್ವಿನಿ ಎಂಬವರು ದಲಿತ ಯುವಕನ ಮೇಲೆ ಹಲ್ಲೆ ನಡೆಸಿದ್ದು ಹಲ್ಲೆಗೊಳಗಾದ ಯುವಕನನ್ನು ಮೂಡುಬೆಳ್ಳೆ ನಿವಾಸಿ ಶಶಿಕುಮಾರ್ (34) ಎಂದು ಗುರುತಿಸಲಾಗಿದೆ.
ದಿನಾಂಕ. 04.02.2024 ರ ರವಿವಾರ ಸಂಜೆ 4 ಗಂಟೆಗೆ ಖಾಸಗಿ ಹೋಟೇಲ್ ನಲ್ಲಿ ಕರವೇ ಸಭೆಯನ್ನು ಕರವೇ ಸದಸ್ಯ ಪ್ರಭಾಕರ ಪೂಜಾರಿ ಕರೆದಿದ್ದು ಈ ನಡುವೆ ನಿಕಟ ಪೂರ್ವ ಅಧ್ಯಕ್ಷ ಅನ್ಸಾರ್ ಅಹಮದ್ ಪ್ರಭಾಕರ ರವರಲ್ಲಿ ಪ್ರಸ್ತುತ ಅಧ್ಯಕ್ಷರೇ ಇಲ್ಲದೇ, ಎಲ್ಲರನ್ನು ವಿಶ್ವಾಸಕ್ಕೆ ತೆಗೆದು ಕೊಳ್ಳದೇ ಹೇಗೆ ಮೀಟಿಂಗ್ ಎಂದು ಕೇಳಿದಾಗ ಅವರೊಳಗೆ ವಾದ-ವಿವಾದ ನಡೆದಿರುತ್ತದೆ.
ಈ ಸಂದರ್ಭದಲ್ಲಿ ಆರೋಪಿಗಳಾದ ಪ್ರಭಾಕರ, ಕುಶಾಲ್, ಜಯ, ಅಶ್ವಿನಿ ಎಂಬವರು ದಲಿತ ಯುವಕನಾದ ಶಶಿಕುಮಾರ್ ಗೆ ಅವಾಚ್ಯ ಶಬ್ದಗಳಿಂದ ಬೈದಿರುವುದು ಮಾತ್ರವಲ್ಲದೇ ಹಲ್ಲೆ ನಡೆಸಿರುತ್ತಾರೆ.
ಈ ಕುರಿತು ಮಲ್ಪೆ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 18/2024 ಕಲಂ: 323, 504 , 506 ಜೊತೆಗೆ 34 ಐಪಿಸಿ & 3(1)(r), 3(1)(s), 3(2)(v-a) SC/ST ACT ರಂತೆ ಪ್ರಕರಣ ದಾಖಲಾಗಿರುತ್ತದೆ.
ಕರವೇ ಪ್ರಭಾಕರ ಪೂಜಾರಿ ವಿರುದ್ಧ ಕಳೆದ 1 ತಿಂಗಳ ಹಿಂದೆ ದಲಿತ ಮಹಿಳೆಗೆ ಜೀವಬೆದರಿಕೆಯೊಡ್ದಿದ ಆರೋಪದ ಮೇಲೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದಲಿತ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…