ಉಡುಪಿ: ಕರಾವಳಿಯಲ್ಲಿ ಸಾಂಪ್ರದಾಯಕವಾಗಿ ನಡೆಸುವ ಕೈರಂಪಣಿ ಮೀನುಗಾರರಿಗೆ ಬಂಪರ್ ಫಸಲು ದೊರೆತಿದೆ. ಉಡುಪಿಯ ಪಡುಕೆರೆಯಲ್ಲಿ ಭರಪೂರ ಮೀನುಗಳು ಬಲೆಗೆ ಬಿದ್ದಿವೆ. ಲಕ್ಷಾಂತರ ರೂಪಾಯಿಯ ಭೂತಾಯಿ ಮೀನು ಬಲೆಗೆ ಬಿದ್ದು ಮೀನುಗಾರರಿಗೆ ಲಾಟರಿ ಹೊಡೆದಂತಾಗಿದೆ.
ಸಾಮಾನ್ಯ ವಾಗಿ ಕೈರಂಪಣಿ ಮೀನುಗಾರಿಕೆ ನಡೆಸುವ ಬಡ ಮೀನುಗಾರರು , ಕಾರ್ಮಿಕರು 10 ರಿಂದ 15 ಜನರ ತಂಡ ಕಟ್ಟಿಕೊಂಡು ಕೈರಂಪಣಿ ಮೀನುಗಾರಿಕೆಯನ್ನು ನಡೆಸುತ್ತಾರೆ. ಸಮುದ್ರ ತೀರದಿಂದ 2 ರಿಂದ 3 ನಾಟಿಕಲ್ ದೂರವರೆಗೆ ಕೈರಂಪಣಿ ಬಲೆಹಾಕಿ ಮೀನುಗಾರಿಕೆಯನ್ನು ನಡೆಸುತ್ತಾರೆ.
ಸಣ್ಣ ದೋಣಿಗಳ ಮೂಲಕ ಸಾಗಿ ಬಲೆ ಬೀಸಿ ಕೆಲವು ಗಂಟೆಗಳ ನಂತರ ದಡದಿಂದಲೇ ಬಲೆಯನ್ನು ಎಳೆಯುತ್ತಾರೆ. ಆದರೆ ಶ್ರಮಕ್ಕೆ ತಕ್ಕ ಪ್ರತಿಫಲದೊರಕುವುದು ಅಪರೂಪ. ಆದರೆ ಮಲ್ಪೆಯ ಪಡುಕೆರೆ ಬೀಚ್ ನಲ್ಲಿ ಕೈರಂಪಣಿ ಬಲೆ ಬೀಸಿದ ಮೀನುಗಾರರ ಅದೃಷ್ಟ ಕುಲಾಯಿಸಿತ್ತು. ಬೂತಾಯಿ ಮೀನುಗಳ ಗುಂಪು ಕೈರಂಪಣಿ ಬಲೆ ಬಿದ್ದಿದೆ. ಕೈರಂಪಣಿ ಮೀನುಗಾರಿಗೆ ಒಂದು ದಿನದ ಮಟ್ಟಿಗೆ ಜೇಬು ತುಂಬವ ಸಂಪಾದನೆ ಯಾದ್ರೆ ತಾಜಾ ಮೀನು ತಿನ್ನ ಬೇಕು ಅನ್ನೊ ಮೀನು ಪ್ರಿಯರಿಗೆ ರುಚಿ ರುಚಿಯಾದ ತಾಜಾ ಬೂತಾಯಿ ಮೀನು ದೊರಕಿದೆ.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…