ಉಡುಪಿ: ಕರಾವಳಿಯಲ್ಲಿ ಸಾಂಪ್ರದಾಯಕವಾಗಿ ನಡೆಸುವ ಕೈರಂಪಣಿ ಮೀನುಗಾರರಿಗೆ ಬಂಪರ್ ಫಸಲು ದೊರೆತಿದೆ. ಉಡುಪಿಯ ಪಡುಕೆರೆಯಲ್ಲಿ ಭರಪೂರ ಮೀನುಗಳು ಬಲೆಗೆ ಬಿದ್ದಿವೆ. ಲಕ್ಷಾಂತರ ರೂಪಾಯಿಯ ಭೂತಾಯಿ ಮೀನು ಬಲೆಗೆ ಬಿದ್ದು ಮೀನುಗಾರರಿಗೆ ಲಾಟರಿ ಹೊಡೆದಂತಾಗಿದೆ.
ಸಾಮಾನ್ಯ ವಾಗಿ ಕೈರಂಪಣಿ ಮೀನುಗಾರಿಕೆ ನಡೆಸುವ ಬಡ ಮೀನುಗಾರರು , ಕಾರ್ಮಿಕರು 10 ರಿಂದ 15 ಜನರ ತಂಡ ಕಟ್ಟಿಕೊಂಡು ಕೈರಂಪಣಿ ಮೀನುಗಾರಿಕೆಯನ್ನು ನಡೆಸುತ್ತಾರೆ. ಸಮುದ್ರ ತೀರದಿಂದ 2 ರಿಂದ 3 ನಾಟಿಕಲ್ ದೂರವರೆಗೆ ಕೈರಂಪಣಿ ಬಲೆಹಾಕಿ ಮೀನುಗಾರಿಕೆಯನ್ನು ನಡೆಸುತ್ತಾರೆ.
ಸಣ್ಣ ದೋಣಿಗಳ ಮೂಲಕ ಸಾಗಿ ಬಲೆ ಬೀಸಿ ಕೆಲವು ಗಂಟೆಗಳ ನಂತರ ದಡದಿಂದಲೇ ಬಲೆಯನ್ನು ಎಳೆಯುತ್ತಾರೆ. ಆದರೆ ಶ್ರಮಕ್ಕೆ ತಕ್ಕ ಪ್ರತಿಫಲದೊರಕುವುದು ಅಪರೂಪ. ಆದರೆ ಮಲ್ಪೆಯ ಪಡುಕೆರೆ ಬೀಚ್ ನಲ್ಲಿ ಕೈರಂಪಣಿ ಬಲೆ ಬೀಸಿದ ಮೀನುಗಾರರ ಅದೃಷ್ಟ ಕುಲಾಯಿಸಿತ್ತು. ಬೂತಾಯಿ ಮೀನುಗಳ ಗುಂಪು ಕೈರಂಪಣಿ ಬಲೆ ಬಿದ್ದಿದೆ. ಕೈರಂಪಣಿ ಮೀನುಗಾರಿಗೆ ಒಂದು ದಿನದ ಮಟ್ಟಿಗೆ ಜೇಬು ತುಂಬವ ಸಂಪಾದನೆ ಯಾದ್ರೆ ತಾಜಾ ಮೀನು ತಿನ್ನ ಬೇಕು ಅನ್ನೊ ಮೀನು ಪ್ರಿಯರಿಗೆ ರುಚಿ ರುಚಿಯಾದ ತಾಜಾ ಬೂತಾಯಿ ಮೀನು ದೊರಕಿದೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…