ಮಲ್ಪೆ: ಬಾಯಿಗೆ ಸೀಮೆ ಎಣ್ಣೆ ಹಾಕಿಕೊಂಡು ಬೆಂಕಿ ಉಗುಳುವ ವೇಳೆ ವ್ಯಕ್ತಿಯೊಬ್ಬರು ತೀವ್ರ ಅಸ್ವಸ್ಥಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟ ಅಪರೂಪ ಘಟನೆ ಗುರುವಾರ (ಸೆ. 12) ಸಂಭವಿಸಿದೆ.
ಮಲ್ಪೆಯ ಸತೀಶ್ (39) ಅವರು ಸಾವನ್ನಪ್ಪಿದ್ದು, ಸೆ. 9ರಂದು ಮಲ್ಪೆ ಬೀಚ್ನಲ್ಲಿ ಗಣೇಶ ವಿಸರ್ಜನ ಮೆರವಣಿಗೆ ವೇಳೆ ಸ್ವ ಇಚ್ಚೆಯಿಂದ ಅವರು ಬಾಯಿಗೆ ಸೀಮೆ ಎಣ್ಣೆ ಹಾಕಿಕೊಂಡು ಬೆಂಕಿಯೊಂದಿಗೆ ಹೊರಕ್ಕೆ ಉಗುಳುತ್ತಿದ್ದರು. ಈ ಸಮಯದಲ್ಲಿ ಆಕಸ್ಮಿಕವಾಗಿ ಸೀಮೆ ಎಣ್ಣೆ ಅವರ ಹೊಟ್ಟೆಯೊಳಗೆ ಹೋಗಿದೆ ಎನ್ನಲಾಗಿದೆ. ತೀವ್ರ ಅಸ್ವಸ್ಥಗೊಂಡು ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ತತ್ಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟರು.
ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…